ಮೈಸೂರು : ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ನಾಮಮಪತ್ರ ಸಲ್ಲಿಸುವ ದಿನವೇ ಶಾಕ್ ಆಗಿದೆ.
ಇಂದು ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸಲಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರತಾಪ್ ಸಿಂಹ ಸರ್ಕಾರಿ ಅಂಚೆಕಚೇರಿ ಮೂಲಕ ಕೇಂದ್ರ ಸರ್ಕಾರದ ಸಾಧನಾ ಕೈಪಿಡಿಯನ್ನು ಹಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್..!
RELATED ARTICLES