ಮಂಡ್ಯ : ಸುಮಲತಾ ಸುನಾಮಿ ‘ದಳ’ಪತಿಗಳ ನಿದ್ದೆಗೆಡಿಸಿದೆಯಾ..? ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸುಮಲತಾ ಅಂದ್ರೆ ಭಯ ಶುರುವಾಯ್ತಾ..?
ಹೌದು, ಇಂಥಾ ಪ್ರಶ್ನೆಗಳು ಮೂಡಲು ಕಾರಣ ಸುಮಲತಾ ಅನ್ನೋ ಹೆಸರಿನ ಮೂವರು ಚುನಾವಣಾ ಅಖಾಡಕ್ಕೆ ಧುಮುಕಿರುವುದು..!
ನೀವು ನೀನಾಸಂ ಸತೀಶ್ ಅವರ ಅಭಿನಯದ ‘ಅಯೋಗ್ಯ’ಸಿನಿಮಾ ನೋಡಿರಬಹುದು? ಆ ಸಿನಿಮಾದಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬೋರೇಗೌಡ ಹೆಸರಿನ ಹಲವರು ಸ್ಪರ್ಧಿಸಿದಂತೆ ಮಂಡ್ಯದಲ್ಲಿ ಸುಮಲತಾ ಹೆಸರಿನ ಮೂವರು ನಾಮಪತ್ರ ಸಲ್ಲಿಸಿದ್ದಾರೆ..! ಸುಮಲತಾ ಅಂಬರೀಶ್ ಅವರನ್ನೂ ಒಳಗೊಂಡಂತೆ ಮಂಡ್ಯ ರಣಕಣದಲ್ಲೀಗ ನಾಲ್ವರು ಸುಮಲತಾ ಹೆಸರಿನ ಸ್ಪರ್ಧಿಗಳಿದ್ದಾರೆ.
ಕೆ.ಆರ್ ಪೇಟೆಯ ಗೊರವಿ ಗ್ರಾಮದ ಸುಮಲತಾ ಮಂಜೇಗೌಡ, ಕನಕಪುರದ ರಂಗನಾಥ ಬಡಾವಣೆಯ ಸುಮಲತಾ ದರ್ಶನ್, ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ ಹೊಸರಿನ ಸುಮಲತಾ ಸಿದ್ದೇಗೌಡ ಎಂಬ ಮೂವರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂವರು ಜೆಡಿಎಸ್ ಮುಖಂಡರ ಜೊತೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಜೆಡಿಎಸ್ ಸುಮಲತಾ ಅಂಬರೀಶ್ ಅವರಿನ ಭಯದಿಂದ ಮತದಾರರ ದಿಕ್ಕು ತಪ್ಪಿಸಲು ಸುಮಲತಾ ಅನ್ನೋ ಹೆಸರಿನ ಮಹಿಳೆಯರಿಂದ ನಾಮಪತ್ರ ಸಲ್ಲಿಕೆ ಮಾಡಿಸಿದ್ರಾ ಅನ್ನೋದು ಸಹಜವಾಗಿ ಮೂಡುವ ಪ್ರಶ್ನೆಯಾಗಿದೆ.
‘ದಳಪತಿ’ಗಳಿಗೆ ಶುರುವಾಯ್ತಾ ಸುಮಲತಾ ಭಯ? ಸಿನಿಮೀಯ ರೀತಿಯಲ್ಲಿ ಸುಮಲತಾ ಹೆಸರಿನ ಮೂವರು ಕಣಕ್ಕೆ..!
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ


