ಮಂಡ್ಯ: ಚುನಾವಣಾ ಪ್ರಚಾರ ನಡೆಸುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಚಾರದ ನಡುವೆಯೇ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ನಗರದ ಮಸೀದಿಗೆ ಭೇಟಿ ನೀಡಿದ್ದಾರೆ. ಮಸೀದಿಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು ಮುಸ್ಲಿಂ ಬಾಂಧವರೊಂದಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದಾರೆ. ಮುಸ್ಲಿಂ ಬಾಂಧವರು ಧರಿಸುವ ಟೋಪಿ ಧರಿಸಿ ನಿಖಿಲ್ ಕುಮಾರಸ್ವಾಮಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಿಖಿಲ್ಗೆ ಶಾಸಕ ಎಂ.ಶ್ರೀನಿವಾಸ್ ಸೇರಿ ಮುಸ್ಲಿಂ ಮುಖಂಡರು ಸಾಥ್ ನೀಡಿದ್ದಾರೆ.
ಮಸೀದಿಯಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಾರ್ಥನೆ..!
RELATED ARTICLES