Friday, September 12, 2025
HomeUncategorizedಮಧು ಪೋಷಕರಿಂದ ಸುದ್ದಿಗೋಷ್ಠಿ

ಮಧು ಪೋಷಕರಿಂದ ಸುದ್ದಿಗೋಷ್ಠಿ

ರಾಯಚೂರು: ಅನುಮಾನಾಸ್ಪದವಾಗಿ ಸಾವಿಗೀಡಾದ ರಾಯಚೂರಿನ ಇಂಜಿನಿಯರಿಂಗ್​​ ವಿದ್ಯಾರ್ಥಿನಿ ಮಧು ಪತ್ತಾರ್​​ ಪೋಷಕರು ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಜ್ಯಾದ್ಯಂತ ಕಿಚ್ಚು ಹತ್ತಿಸಿರುವ ಜಸ್ಟೀಸ್ ಫಾರ್ ಮಧು ಅಭಿಯಾನಕ್ಕೆ ನಟ, ನಟಿಯರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ವೀರ ಸಾವರ್ಕರ್ ಯೂತ್ ಅಸೋಸಿಯೇಶನ್​ ವತಿಯಿಂದ ಕ್ಯಾಂಡಲ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ರಾಜ್ಯಾದ್ಯಂತ ಮಧು ಸಾವಿಗೆ ನ್ಯಾಯಕ್ಕಾಗಿ ಹೋರಾಟದ ಕಾವು ಹೆಚ್ಚಿದೆ. ಬೆಳಗ್ಗೆ 11ಗಂಟೆಗೆ ಮಧು ಪತ್ತಾರ್​ ಪೋಷಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಎಪ್ರಿಲ್ 13ರಂದು ಕಾಣೆಯಾಗಿದ್ದ ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್‌ ಏಪ್ರಿಲ್‌.15ರಂದು ಕಾಲೇಜಿನಿಂದ 4 ಕಿಲೋ ಮೀಟರ್ ದೂರದ ಅಜ್ಞಾತ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವದ ಪಕ್ಕದಲ್ಲಿಯೇ ಡೆತ್​ ನೋಟ್ ಸಿಕ್ಕಿದ್ದು, ಅದನ್ನು ಆಧರಿಸಿ ಪೊಲೀಸರು ಆತ್ಮಹತ್ಯೆ ಕೇಸು ದಾಖಲಿಸಿಕೊಂಡಿದ್ದಾರೆ. ಮಧು ಪತ್ತಾರ್‌ ಶವದ ಮೇಲಾದ ಗಾಯಗಳು ಸಾಕಷ್ಟು ಅನುಮಾನಗಳನ್ನ ಹುಟ್ಟು ಹಾಕಿತ್ತು. ಪೋಷಕರ ದೂರಿನನ್ವಯ ಪೊಲೀಸರು ಅತ್ಯಾಚಾರ ಹಾಗೂ ಕೊಲೆ ಕೇಸ್‌ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments