Site icon PowerTV

‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ’ : ಸಿದ್ದರಾಮಯ್ಯ

ಹುಬ್ಬಳ್ಳಿ :  ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಅಂತ ಮಾಜಿ ಮುಖ್ಯಮಂತ್ರಿ, ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು ಅನ್ನೋ ಕಾಂಗ್ರೆಸ್​ನ ಕೆಲವು ನಾಯಕರ ಹೇಳಿಕೆ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ”ನಾನು ಹೋಗಿ ಕೂರಲು ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ‘ಸಿದ್ದರಾಮಯ್ಯರೇ ಮುಂದಿನ ಸಿಎಂ ಅಂತಾ ಅಭಿಮಾನಕ್ಕೆ ಹೇಳ್ತಾರೆ. ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸೋದ್ಯಾಕೆ? ಕುಮಾರಸ್ವಾಮಿಯೇ ಸಮ್ಮಿಶ್ರ ಸರ್ಕಾರದ ಸಿಎಂ, ಈಗ ಬದಲಾವಣೆ ಆಗಲ್ಲ. ಊಹಾಪೋಹಗಳಿಗೆ ನಾನು ಉತ್ತರ ಕೊಡೋಕಾಗಲ್ಲ‌” ಎಂದಿದ್ದಾರೆ.

Exit mobile version