Sunday, September 7, 2025
HomeUncategorizedಇವಿಎಂ ಬಗ್ಗೆ ಸಿಎಂ ಕುಮಾರಸ್ವಾಮಿ ತಗಾದೆ..!

ಇವಿಎಂ ಬಗ್ಗೆ ಸಿಎಂ ಕುಮಾರಸ್ವಾಮಿ ತಗಾದೆ..!

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗದೆ. ನಿನ್ನೆ 7ನೇ ಹಾಗೂ ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ಮತಗಟ್ಟೆ ಸಮೀಕ್ಷೆಗಳು ಹೊರಬಿದ್ದಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್​ಡಿಎಯೇ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಅಂತ ಹೇಳುತ್ತಿವೆ. ಈ ಸಮೀಕ್ಷೆಗಳ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ಮತಯಂತ್ರಗಳ ವಿರುದ್ಧ ಅಪಸ್ವರಗಳು ಕೇಳಿಬಂದಿವೆ.
ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಇವಿಎಂ ಬಗ್ಗೆ ಅಪಸ್ವರ ತೆಗೆದಿದ್ದರು. ಈಗ ಸಿಎಂ ಕುಮಾರಸ್ವಾಮಿ ಅವರೂ ಕೂಡ ಇವಿಎಂ ಬಗ್ಗೆ ಅಪಸ್ವರ ತೆಗೆದು ಅಸಮಾಧಾನದಿಂದ ಟ್ವೀಟ್ ಮಾಡಿದ್ದಾರೆ.
ಮತಗಟ್ಟೆ ಸಮೀಕ್ಷೆಗಳ ಬಗ್ಗೆ ಸಿಡಿಮಿಡಿಗೊಂಡು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿ ಅವರನ್ನು ಬಿಂಬಿಸುವ ಸಲುವಾಗಿ ಸಮೀಕ್ಷೆಗಳ ಬಳಕೆಯನ್ನು ಮಾಡಲಾಗಿದೆ. ಮುಂದುವರಿದ ರಾಷ್ಟ್ರಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತಿದೆ. ನಮ್ಮಲ್ಲಿ ಯಾಕೆ‌ ಇವಿಎಂ ಬಳಕೆ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದ ಇವಿಎಂಗಳ ದೋಷಗಳ ಬಗ್ಗೆ ಸುಪ್ರೀಂ ಮೊರೆ ಹೋಗುವ ಪ್ರಸ್ತಾಪ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments