ಬೆಂಗಳೂರು : ಜೆಡಿಎಸ್ನ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿಯವರನ್ನು ನೇಮಕ ಮಾಡಲಾಗಿದೆ. ಹೆಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೊಸ ಸಾರಥಿಯನ್ನು ನೇಮಿಸಲಾಗಿದೆ.
ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ನೂತನ ಸಾರಥಿಯ ಹೆಸರನ್ನು ಘೋಷಿಸಿದ್ರು. ಅದೇರೀತಿ ಪಕ್ಷದ ಕಾರ್ಯಧ್ಯಕ್ಷರಾಗಿ ಮಧು ಬಂಗಾರಪ್ಪ, ಪಕ್ಷದ ಹಿರಿಯ ಉಪಾಧ್ಯಕ್ಷರಾಗಿ ಶಾಸಕ ಗೋಪಲಯ್ಯ ನೇಮಕವಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ, ಯುವ ಘಟಕದ ಸಾರಥಿಯಾಗಿ ನಿಖಿಲ್..!
RELATED ARTICLES