Site icon PowerTV

ಕೆಎಂಎಫ್​ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ..!

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಅರಬಾವಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಸುವುದಕ್ಕಿಂತಲೂ ಮುಂಚೆ ನಾಮಪತ್ರ ಸಲ್ಲಿಸಿದ್ದ ಹೆಚ್.ಡಿ ರೇವಣ್ಣ ನಿರ್ದೇಶಕರು ಜಾರಕಿಹೊಳಿ ಪರ ಇದ್ದ ಹಿನ್ನೆಲೆಯಲ್ಲಿ ತಮ್ಮ ನಾಮತ್ರ ವಾಪಸ್ ಪಡೆದಿದ್ದರು. ರೇವಣ್ಣ ನಾಮಪತ್ರ ಹಿಂಪಡೆದಿದ್ದರಿಂದ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷ ಗಾದಿಯನ್ನು ಅವಿರೋಧವಾಗಿ ಏರಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರಿಗೆ 13 ನಿರ್ದೇಶಕರು ಬೆಂಬಲ ನೀಡಿದ್ದರು.

Exit mobile version