ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಸಿಂಧ್ಯಾ..!

ನವದೆಹಲಿ: ಕಾಂಗ್ರೆಸ್ ಮುಖಂಡ  ಜ್ಯೋತಿರಾದಿತ್ಯ ಸಿಂಧ್ಯಾ ಬಿಜೆಪಿ ಸೇರ್ತಾರಾ ಅನ್ನುವ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಸಿಂಧ್ಯಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ  ರಾಜೀನಾಮೆ ನೀಡಿದ್ದಾರೆ.

ಜನರ ಸೇವೆ ಮಾಡಬೇಕೆಂಬ ಆಸೆ ನನ್ನಲ್ಲಿ ಇನ್ನು ಮುಂದೆಯೂ ಹಾಗೆಯೇ ಮುಂದುವರಿಯಲಿದೆ. ಆದರೆ ಅದನ್ನು ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡು ಮಾಡಲು ಸಾಧ್ಯವಿಲ್ಲ. ಹಾಗಾಗಿ ಇದು ಹೊಸ ಆರಂಭಕ್ಕೆ  ಸೂಕ್ತ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಸದ್ಯ ರಾಜೀನಾಮೆಯಿಂದ ಸಿಂಧ್ಯಾ ಬಿಜೆಪಿ ಸೇರ್ತಾರೆ ಅನ್ನುವ ನಂಬಿಕೆ ಹೆಚ್ಚಾಗಿದೆ.

RELATED ARTICLES

Related Articles

TRENDING ARTICLES