ನಗರದ ಎಲ್ಲಾ ವಾರ್ಡ್ ನಲ್ಲಿ ಕರೋನಾ ಜಾಗೃತಿ ಮೂಡಿಸಲು ಮುಂದಾದ ಬಿ.ಜೆ.ಪಿ ಮುಖಂಡರು

ಚಿತ್ರದುರ್ಗ : ನಗರದ ಎಲ್ಲಾ ವಾರ್ಡ್ ಗಳಲ್ಲಿ ಅಟೋ ಮೂಲಕ ಪ್ರತಿ ಮನೆಮನೆಗೂ ಕೊರೋನಾ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶಾಸಕ ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕಡ್ಡಾಯವಾಗಿ ಮಾಸ್ಕ್ ದರಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡರೆ ಮಾತ್ರ ಕೊರೋನ ತಡೆಗಟ್ಟುಲು ಸಾದ್ಯ. ಇನ್ನೂ ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬರಬೇಕು ಇಲ್ಲವಾದ್ರೆ ಮನೆಯಿಂದ ಆಚೆ ಬರಬೇಡಿ ಅಂತ ಶಾಸಕರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಜಿಲ್ಲಾ ಬಿ.ಜೆ.ಪಿ ಯ ಎಲ್ಲಾ ಕಾರ್ಯಕರ್ತರು ನಗರದ ಎಲ್ಲಾ ವಾರ್ಡ್ ಗಳಲ್ಲಿ ಸಂಚರಿಸಿ ಕೊವಿಡ್ ಕುರಿತು ಅರಿವು ಮೂಡಿಸುವ ಕೆಲಸದಲ್ಲಿ ಭಾಗಿಯಾಗಲಿದ್ದಾರೆ.

RELATED ARTICLES

Related Articles

TRENDING ARTICLES