Sunday, September 14, 2025
HomeUncategorizedಸ್ಯಾಂಡಲ್​ವುಡ್​ ಡ್ರಗ್ಸ್​ ಕಳಂಕದ ಬಗ್ಗೆ ಜಗ್ಗೇಶ್ ಹೇಳಿದ್ದೇನು?

ಸ್ಯಾಂಡಲ್​ವುಡ್​ ಡ್ರಗ್ಸ್​ ಕಳಂಕದ ಬಗ್ಗೆ ಜಗ್ಗೇಶ್ ಹೇಳಿದ್ದೇನು?

ಬೆಂಗಳೂರು : ಸ್ಯಾಂಡಲ್​​ವುಡ್​​ನ ಅನೇಕರು ಡ್ರಗ್ಸ್​​ ಜಾಲದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.  ಈ ವಿಷಯದ ಬಿಸಿಬಿಸಿ ಚರ್ಚೆಯಾಗುತ್ತಿದ್ದು, ನಟ ಜಗ್ಗೇಶ್​​​​​ ಮೌನ ಮುರಿದಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್ ಮಾಡಿರೋ ಜಗ್ಗೇಶ್, ` ಶ್ರೇಷ್ಠ ಮನುಜ ಜನ್ಮ. ಅದು ನಶ್ವರ ಸತ್ಯ. ಆದ್ರೂ ಆ ನಶ್ವರ ದೇಹ ನಶಿಸುವ ಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಿಂದೆ ಬರೀ ಸಿನಿಮಾ ಅಲ್ಲಾ, ಸಮಾಜವೇ ಆಕರ್ಷಿತ ಆಗುತ್ತಿದೆ. ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ ಅವರ ಹೆಜ್ಜೆ ತಪ್ಪುದಾರಿ ತುಳಿಯದು. ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆ ಹಾದರದ ದಾಸರು. ಉಪ್ಪು ತಿಂದವ ನೀರು ಕುಡಿಯುವ’ ಎಂದಿದ್ದಾರೆ.

‘ಸರಿಯಾಗಿ ಬಾಳಿ ಬದುಕುವ ನಿರ್ಧಾರ ಮಾಡಿ ಶ್ರಮಿಸುವವರು ಎಲ್ಲೇ ಇದ್ದರೂ ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವವರನ್ನು ಮಠಕ್ಕೆ ಸೇರಿಸಿದರೂ ನಶೆ ಹಾದರದ ಬಿಸಿ ಹೆಂಚಿನ ಮೇಲೆ ಸ್ವಲ್ಪ ಕಾಲ ಬದುಕಿ ವಿಕೃತ ಆನಂದ ಅನುಭವಿಸಿ ಸೀದು ಹೋಗುತ್ತಾರೆ. ಏಕ್ ಮಾರ್ ದೋ ತಕಡ. ತಪ್ಪು ಮಾಡಿದವರ ಬೆತ್ತಲೆ ಮಾಡಿ’ ಎಂದು ಹೇಳಿದ್ದಾರೆ.

“30ಸಿನಿಮಾದಲ್ಲಿ ನಟಿಸಿದ್ದರೂ ನಿರ್ಮಾಪಕ ಮನೆ ಮುಂದೆ ಭಿಕ್ಷುಕರಂತೆ ಸಂಭಾವನೆಗೆ ಕಾದು, ಕೊಟ್ಟ ಕ್ಷಣ ರೇಷನ್ ಅಂಗಡಿ ಮುಂದೆ ಅಕ್ಕಿ, ಸೀಮೆಎಣ್ಣೆಗೆ ಕ್ಯೂನಿಂತವರು ನಾವು! ಇಂದು 2ಸಿನಿಮಾಗೆ ಕುಬೇರನ ಮಕ್ಕಳು! ಹೇಗೆ ಇಂಥ `catch’ ನನಗೆ 57ವರ್ಷಕ್ಕು ಅರ್ಥವಾಗಿಲ್ಲಾ! ಇದೇ 2015ರಿಂದ ಮೋಜು ಮಸ್ತಿ-ಕುಸ್ತಿ ಸಿನಿಮಾ ಜೀವನ!ಎಂದು ಟ್ವೀಟ್ ಮಾಡಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments