Site icon PowerTV

ವಿಧಾನ ಪರಿಷತ್ ಗಲಾಟೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್ : ವಿಶ್ವೇಶ್ವರ ಹೆಗಡೆ ಕಾಗೇರಿ

ಹುಬ್ಬಳ್ಳಿ: ವಿಧಾನ ಪರಿಷತ್ತಿನಲ್ಲಿ ನಾವೆಲ್ಲರೂ ತಲೆ ತಗ್ಗಿಸುವ ಕೆಲಸ ಆಗಿದೆ. ಈ ರೀತಿಯ ಘಟನೆ ನಡೆಯದಂತೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿಸುವ ಕೆಲಸ ಮಾಡಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನ ಪರಿಷತ್ ಗಲಾಟೆ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೋಷಾರೋಪಣ ಮಾಡೋದಕ್ಕೆ ಸಾಕಷ್ಟು ವಿಷಯ, ವ್ಯಕ್ತಿಗಳು ಸಿಗುತ್ತಾರೆ. ಅದ್ದರಿಂದ ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಸ್ವಯಂ ಶಿಸ್ತಿನ ಪಾಲನೆಗೆ ನಾವೆಲ್ಲ ಸಿದ್ಧಗೊಳ್ಳಬೇಕು ಎಂದು ಹೇಳಿದರು.

Exit mobile version