Site icon PowerTV

ಕರ್ನಾಟಕದಲ್ಲಿ ಕೊರೋನಾ, ಓಮಿಕ್ರಾನ್ ಹೆಚ್ಚಳ : ತಜ್ಞರ ಜೊತೆ ಸಿಎಂ ಸಭೆ

ಬೆಂಗಳೂರು : ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊರೋನಾ ಮತ್ತು ಓಮಿಕ್ರಾನ್ ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ ಸಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಕ್ಕ ಪಕ್ಕದ ರಾಜ್ಯಗಳಲ್ಲಿ ಹಾಗೂ ಕರ್ನಾಟಕದಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ ಎಂದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ. ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ ಎಂದು ಹೇಳಿದರು.

Exit mobile version