Wednesday, September 3, 2025
HomeUncategorizedಚಿನ್ನ ಚೋರ ಅಂದರ್​​​​​​​​​

ಚಿನ್ನ ಚೋರ ಅಂದರ್​​​​​​​​​

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಕಾರ್ಯಾಚರಣೆ ಮಾಡಿ ಚಿನ್ನಾಭರಣ ಎಗರಿಸಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಯಾಟಲೈಟ್ ಬಳಿ ಬಸ್ ಇಳಿಯುವಾಗ ಚಿನ್ನಾಭರಣವನ್ನ ಆರೋಪಿಗಳು ತಮ್ಮ ಕರಾಮತ್ತು ತೋರಿಸಿ ಎಗರಿಸಿದ್ದರು. ಈ ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಸುತ್ತಮುತ್ತಲಿನ ಸಿಸಿಟಿವಿ ಫುಟೇಜ್​ಗಳನ್ನು ಆಧರಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆನಂದ್ ಗಿರಿ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಇನ್ನು ವಿಚಾರಣೆ ವೇಳೆ ಹಲವು ಮನೆಗಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬಂಧಿತನಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

RELATED ARTICLES
- Advertisment -
Google search engine

Most Popular

Recent Comments