Thursday, August 28, 2025
HomeUncategorizedಉಡುಪಿ ಶಾಲೆಯ ಹಿಜಾಬ್ ಪ್ರಕರಣ; ಬಿ.ಸಿ.ನಾಗೇಶ್ ಸಮರ್ಥನೆ

ಉಡುಪಿ ಶಾಲೆಯ ಹಿಜಾಬ್ ಪ್ರಕರಣ; ಬಿ.ಸಿ.ನಾಗೇಶ್ ಸಮರ್ಥನೆ

ಉಡುಪಿ: ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹಿಜಾಬ್‌ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಪ್ರತಿಕ್ರಿಯೆ ನೀಡಿದ್ದು, ಕಾಲೇಜಿನಲ್ಲಿ ನಡೆದ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಕಾಲೇಜಿನಲ್ಲಿ 1985ರಿಂದ ಸಮವಸ್ತ್ರ ಜಾರಿಯಲ್ಲಿದ್ದು, SDMC ತೀರ್ಮಾನದಂತೆ ಈಗಲೂ ಮುಂದುವರಿಸಿಕೊಂಡು ಬರಲಾಗುತ್ತಿದೆ. ಕಾಲೇಜಿಗೆ ನೂರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಸೇರ್ಪಡೆ ಯಾಗಿದ್ದಾರೆ. ಎಲ್ಲಾ ವಿದ್ಯಾರ್ಥಿನಿಯರು ಮತ್ತು ಪೋಷಕರು ಸಮವಸ್ತ್ರ ಪಾಲನೆ ಮಾಡುವುದಾಗಿ ತಿಳಿಸಿದ್ದಾರೆ. ಈ ಆರು ಮಂದಿ ವಿದ್ಯಾರ್ಥಿನಿಯರು ಸಹ 21 ದಿನಗಳ ಹಿಂದೆ ಹಿಜಾಬ್‌ ಧರಿಸಿ ಬರುತ್ತಿರಲಿಲ್ಲ. ದಾಖಲಾತಿ ವೇಳೆ ಸಮವಸ್ತ್ರ ಪಾಲನೆಯನ್ನು ಒಪ್ಪಿಕೊಂಡು, ಈಗ ಧಾರ್ಮಿಕ ಕಾರಣಗಳನ್ನು ನೀಡಿ ವಿರೋಧ ವ್ಯಕ್ತಪಡಿಸುವುದು ಅಶಿಸ್ತು ತಾನೆ? ಎಂದು ಮಂತ್ರಿಗಳು ಪ್ರಶ್ನಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments