Site icon PowerTV

ಅಧಿಕಾರಕ್ಕಾಗಿ ಸಿದ್ದರಾಮಯ್ಯ ಸಿದ್ದರಹೀಮ್ ಆಗ್ತಾರೆ : ಪ್ರತಾಪ್ ಸಿಂಹ

ಮೈಸೂರು: ರಾಜ್ಯದಲ್ಲಿ ಹಿಜಾಬ್ ವಿವಾದ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆ ವಿಚಾರ ನೀಡಿರುವ ಹಿನ್ನಲೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರಿಗೆ ಟಾಂಗ್​​ ನೀಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ, ಯಾಕಂದರೆ ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜ ಪೇಟೆಯಲ್ಲಿ ಚುನಾವಣೆ ಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕೋಸ್ಕರ ಸಿದ್ದರಾಮಯ್ಯ ಬೇಕಿದ್ದರೇ ಸಿದ್ದರಹೀಮ್ ಅಯ್ಯ ಅಂತಾ ಬೇಕಾದರೂ ಹೆಸರು ಬದಲಾಯಿಸಿಕೊಳ್ಳುತ್ತಾರೆ. ಹಾಗಾಗಿ ಅವರ ಹೇಳಿಕೆಯನ್ನು ಗಂಭೀರವಾಗಿ ಯಾರೂ ಕೂಡ ಪರಿಗಣಿಸಬೇಡಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

Exit mobile version