Saturday, August 23, 2025
Google search engine
HomeUncategorizedಸಚಿವ ಈಶ್ವರಪ್ಪರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ: ಪ್ರಿಯಾಂಕ್ ಖರ್ಗೆ

ಸಚಿವ ಈಶ್ವರಪ್ಪರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ: ಪ್ರಿಯಾಂಕ್ ಖರ್ಗೆ

ರಾಷ್ಟ್ರಧ್ವಜಕ್ಕೆ ಬಿಜೆಪಿ ಗೌರವ ಕೊಡಬೇಕೆಂದರೆ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ, ಈಶ್ವರಪ್ಪನವರ ರಾಜೀನಾಮೆ ತೆಗೆದುಕೊಳ್ಳಲು ಯಾಕೆ ಆಗುತ್ತಿಲ್ಲ? ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಅಸಹಾಯಕರಾಗಿ ಅದ್ಹೇಕೆ ಕೂತಿದ್ದಾರೆ ಎಂದು ಗೊತ್ತಿಲ್ಲ . ರಾಜೀನಾಮೆ ಕೊಡಲು ಈಶ್ವರಪ್ಪ ಸಿದ್ಧವಿಲ್ಲ ಅಂದ್ರೆ, ಸಿಎಂ ಅವರೇ ವಜಾ ಮಾಡಲಿ. ಬಿಜೆಪಿ ಹೈಕಮಾಂಡ್ ಮತ್ತು ನಳಿನ್​ ಕುಮಾರ್​ ಕಟೀಲ್ ಏನು ಮಾಡುತ್ತಿದ್ದಾರೆ. ನನಗೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ನೋಡಿದರೆ ಅಯ್ಯೋ ಅನಿಸುತ್ತೆ. ಬಿಟ್‌ಕಾಯಿನ್ ವಿಚಾರ ಬಂದರೂ ಬಾಯಿ ಬಿಡಲಿಲ್ಲ. ಕನಿಷ್ಠ ಪ್ರಿಯಾಂಕ್ ಖರ್ಗೆ ಹೇಳಿದ್ದು ಸುಳ್ಳು ಅಂತ ಆದರೂ ಬಾಯಿ ಬಿಡಬೇಕಲ್ಲವೇ? ಎಂದು ಟೀಕಿಸಿದರು.

RELATED ARTICLES
- Advertisment -
Google search engine

Most Popular

Recent Comments