ಹುಬ್ಬಳ್ಳಿ: ಕಳೆದ ದಿನ ಹುಬ್ಬಳ್ಳಿಯಲ್ಲಿ ಸುರಿದ ಮಳೆ ಕೆಲ ಕಾಲ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿದ್ದು ಬಿರುಗಾಳಿಯಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ಹೌದು ಕಳೆದ ದಿನ ಸಂಜೆಯ ಹೊತ್ತಿಗಾಗಲೇ ಆರಂಭಗೊಂಡಿರುವ ಮಳೆ ಒಂದಿಲ್ಲೊಂದು ರೀತಿಯಲ್ಲಿ ಅವಾಂತರ ಸೃಷ್ಟಿಸಿತ್ತು. ಬಿರುಗಾಳಿಯಲ್ಲಿ ಸಿಲುಕಿದ ವಿದ್ಯಾರ್ಥಿನಿಯರು ಒದ್ದಾಡಿದ ವಿಡಿಯೋವೊಂದು ಸದ್ಯ ವೈರಲ್ ಆಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಸಿದ ಮಳೆ ಮತ್ತಷ್ಟು ಭಯಪಡಿಸಿದೆ.


