Site icon PowerTV

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ಕಿಡಿ

ಶ್ರೀಲಂಕಾ : ದೇಶದಲ್ಲಿ ತೈಲ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ನೋಡಿದರೆ ಭಾರತದ ಸ್ಥಿತಿಯೂ ಶ್ರೀಲಂಕಾದಂತೆಯೇ ಭಾಸವಾಗುತ್ತಿದೆ ಎಂದು ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತ, ಶ್ರೀಲಂಕಾ ಆರ್ಥಿಕ ಸ್ಥಿತಿಗತಿಗಳನ್ನು ತೋರಿಸುವ ಅಂಕಿ ಅಂಶದ ಗ್ರಾಫ್‌ನೊಂದಿಗೆ ಜನರನ್ನು ವಿಚಲಿತಗೊಳಿಸುವುದರಿಂದ ಸತ್ಯಗಳು ಬದಲಾಗುವುದಿಲ್ಲ. ಭಾರತವು ಶ್ರೀಲಂಕಾದಂತೆಯೇ ಭಾಸವಾಗುತ್ತಿದೆ. ಶ್ರೀಲಂಕಾ ಹಾಗೂ ಭಾರತದ ಪರಿಸ್ಥಿತಿಯನ್ನು ತುಲನೆ ಮಾಡುವ ರೇಖಾ ನಕ್ಷೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಇದರಲ್ಲಿ ತೈಲ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ತುಲನಾತ್ಮಕ ಮಾಹಿತಿ ಇದೆ. ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ನೆಲಕಚ್ಚಿದೆ. ಆಹಾರ ಉತ್ಪಾದನೆಯೂ ಸಮರ್ಪಕವಾಗಿ ಆಗದ ಕಾರಣ ಅದರ ಭದ್ರತೆಯೂ ಕುಸಿದಿದೆ. ಇದರಿಂದ ಅಲ್ಲಿನ ಪ್ರಜೆಗಳು ಸರ್ಕಾರದ ವಿರುದ್ಧ ಬಂಡೆದಿದ್ದಾರೆ. ಇದನ್ನು ಶಮನಗೊಳಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಕರ್ಫ್ಯೂ ಹೇರುವ ಮೂಲಕ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

Exit mobile version