Wednesday, September 17, 2025
HomeUncategorizedಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ :ಇಬ್ಬರು ಸಾವು, ಹಲವರಿಗೆ ಗಾಯ

ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ :ಇಬ್ಬರು ಸಾವು, ಹಲವರಿಗೆ ಗಾಯ

ರಾಂಚಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ನಾಯಕರ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಜಾರ್ಖಂಡ್​​ನ ರಾಂಚಿಯಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳ ವಿರುದ್ಧ ಹಿಂಸಾಚಾರ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತು ವಿವಾದದ ನಡುವೆ ಪಕ್ಷದಿಂದ ಉಚ್ಛಾಟಿತರಾಗಿರುವ ನವೀನ್ ಜಿಂದಾಲ್ ಅವರ ಹೇಳಿಕೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯ್ತು.

ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದಾರೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಹಿಂಸಾಚಾರದ ಹಿನ್ನೆಲೆ ರಾಂಚಿಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments