Sunday, September 7, 2025
HomeUncategorizedಹಿಂದೂ ಸಂಘಟನೆಗಳಿಂದ ಬಿಬಿಎಂಪಿಗೆ ಮತ್ತೊಂದು ಡೆಡ್‌ಲೈನ್

ಹಿಂದೂ ಸಂಘಟನೆಗಳಿಂದ ಬಿಬಿಎಂಪಿಗೆ ಮತ್ತೊಂದು ಡೆಡ್‌ಲೈನ್

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿ ಆಟದ ಮೈದಾನನಾ..? ಅನ್ನೋ ಗೊಂದಲ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳೇ ಕಾಣ್ತಿಲ್ಲ. ಇದೇ ವಿಚಾರ ಈಗ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಇದೀಗ ಹಿಂದೂಪರ ಸಂಘಟನೆ ವಿವಾದ ಬಗೆಹರಿಸಲು ಪಾಲಿಕೆಗೆ ಮತ್ತೊಂದು ಡೆಡ್‌ಲೈನ್ ನೀಡಿದೆ.

ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದ ಸುತ್ತಲೂ ಬಿಬಿಎಂಪಿ 12 ಕಂಬಗಳನ್ನು ನೆಟ್ಟಿದ್ದು, ಸಿಸಿ ಕ್ಯಾಮೆರಾ ಅಳವಡಿಸಲು ಸಿದ್ಧತೆ ಅಂತಿಮಗೊಳಿಸಿದೆ. ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಿದೆ. ಆದ್ರೆ ಇದು ಪಾಲಿಕೆಯ ಸ್ವತ್ತು ಅಂತ ಬೋರ್ಡ್​ ಹಾಕಲು ಅಧಿಕಾರಿಗಳು ಮುಂದೆ ಬರ್ತಿಲ್ಲ.

ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು ಅಂತ ಹಿಂದೂ ಸನಾತನ ಪರಿಷತ್ ಬಿಬಿಎಂಪಿಗೆ ಮನವಿ ನೀಡಿತ್ತು. ಅದೇ ರೀತಿ ಶ್ರೀರಾಮ ಸೇನೆ ಕೂಡಾ ಹಿಂದೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮ ಗಳ ಜೊತೆ ಗಣೇಶೋತ್ಸವ ಕ್ಕೂ ಅವಕಾಶ ನೀಡಿ ಅದರ ಜೊತೆ ಯೋಗದಿನಾಚರಣೆಗೂ ಅವಕಾಶ ನೀಡಬೇಕು ಅಂತ ಇಂದು ಮಧ್ಯಾಹ್ನ 3 ಗಂಟೆಯ ಒಳಗೆ ನಿಲುವು ತಿಳಿಸಬೇಕೆಂದು ಕೋರಿ ಹಿಂದೂಪರ ಸಂಘಟನೆಗಳು ಬಿಬಿಎಂಪಿಗೆ ಡೆಡ್​ಲೈನ್​ ಕೊಟ್ಟಿದ್ವು.

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೋಡಬೇಕು ಎಂದು ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಮಾಡಲಾಗಿದೆ. ಈ ಸಂಬಂಧ ಜೂನ್ 7ರಂದು ಮನವಿ ಸಲ್ಲಿಸಿದ್ದರೂ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಅನುಮತಿ ಕೊಡುವುದು ಅಥವಾ ಇಲ್ಲ ಎನ್ನುವ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಬೇಕು. ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೊಡದಿದ್ದರೆ, ನ್ಯಾಯಾಲಯದ​ ಮೊರೆ ಹೋಗುವುದಾಗಿ ವಿಶ್ವ ಸನಾತನ ಪರಿಷತ್​​ ಹಾಗೂ ಶ್ರೀರಾಮ ಸೇನೆ ಬಿಬಿಎಂಪಿಗೆ ಮತ್ತೊಮ್ಮೆ ಎರಡು ದಿನಗಳ ಕಾಲ ಡೆಡ್ ಲೈನ್ ನೀಡಿದೆ.

ಸದ್ಯ ಚಾಮರಾಜಪೇಟೆ ಮೈದಾನ ದಿನದಿಂದ ದಿನಕ್ಕೆ ಯುದ್ಧಭೂಮಿಯ ರೀತಿ ಮಾರ್ಪಡುತ್ತಿದೆ. ಅತ್ತ ವಕ್ಫ್ ಬೋರ್ಡ್ ನಮಗೆ ಸೇರುತ್ತೆ ಅಂತಿದ್ರೆ, ಇತ್ತ ಪಾಲಿಕೆ ಆಟದ ಮೈದಾನ ಎನ್ನುತ್ತಿದೆ. ಇದೆಲ್ಲದರ ನಡುವೆ ಹಿಂದೂಪರ ಸಂಘಟನೆಗಳು ಅನುಮತಿ ಸಿಗದಿದ್ರೆ ಕೋರ್ಟ್ ಮೊರೆ ಹೋಗುವ ಲೆಕ್ಕಾಚಾರದಲ್ಲಿವೆ.

ಕ್ಯಾಮರಾ ಮ್ಯಾನ್ ಧನರಾಜ್ ಜೊತೆ ಮಲ್ಲಾಂಡಹಳ್ಳಿ ಶಶಿಧರ್ ಪವರ್ ಟಿವಿ ಬೆಂಗಳೂರು

RELATED ARTICLES
- Advertisment -
Google search engine

Most Popular

Recent Comments