Saturday, August 23, 2025
Google search engine
HomeUncategorized‘ಅಗ್ನಿಪಥ್​​​’ಗೆ ತೆಲಂಗಾಣ ಸಿಎಂ ಆಕ್ರೋಶ

‘ಅಗ್ನಿಪಥ್​​​’ಗೆ ತೆಲಂಗಾಣ ಸಿಎಂ ಆಕ್ರೋಶ

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೆಲಂಗಾಣ ಸಿಎಂ ಕೆಸಿ ಚಂದ್ರಶೇಖರ್​ರಾವ್​​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ತಪ್ಪು ನಿರ್ಧಾರ ಎಂದು ಅವರು ಕಿಡಿಕಾರಿದ್ದಾರೆ.

ಈಗಾಗಲೇ ಅಗ್ನಿಪಥ ಯೋಜನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗ್ತಿದ್ದು, ಉತ್ತರ ಪ್ರದೇಶ, ಬಿಹಾರ, ತೆಲಂಗಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ನಿನ್ನೆ ಸಿಕಂದರಾಬಾದ್​​​ನಲ್ಲಿ 4 ರೈಲು ಇಂಜಿನ್​​​​ಗಳಿಗೆ & 3 ಬೋಗಿಗಳಿಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದರು. ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಪೊಲೀಸರ ಗುಂಡಿನ ದಾಳಿಗೆ ಓರ್ವ ಬಲಿಯಾಗಿದ್ದ. ಈ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ ಕೆಸಿಆರ್, ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದರು.

ಕೇಂದ್ರದ ತಪ್ಪು ನಿರ್ಧಾರಗಳಿಂದ ಯುವಕನ ಸಾವಾಗಿದೆ ಎಂದು ಕಿಡಿಕಾರಿರುವ ತೆಲಂಗಾಣ ಸಿಎಂ, ನಾವು ನಮ್ಮ ರಾಜ್ಯದ ಮಕ್ಕಳನ್ನು ರಕ್ಷಿಸಿಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments