Site icon PowerTV

ಇನ್ನೆರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಬೆಂಗಳೂರು: ನೈಋತ್ಯ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ. ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಮೂರು ದಿನ ಕರಾವಳಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಪಶ್ಚಿಮ ಘಟ್ಟ ಜಿಲ್ಲೆಗಳಲ್ಲೂ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಳನಾಡಿನಲ್ಲಿ ಎರಡು ದಿನ ಉತ್ತಮ ಮಳೆ ಸಾಧ್ಯ ತೆಯಿದ್ದು, ದಕ್ಷಿಣ ಒಳನಾಡಿನ ಹಲವೆಡೆ ನಾಲ್ಕು ದಿನ ಮಳೆಯಾಗಲಿದೆ. ಅಲ್ಲದೇ, ಕರಾವಳಿ ಸಮುದ್ರದಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀಟರ್ ವೇಗದಲ್ಲಿ ಚಲನೆ ಇರಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

Exit mobile version