Thursday, August 28, 2025
HomeUncategorizedಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ : ಬಿ.ವೈ ವಿಜಯೇಂದ್ರ

ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ : ಬಿ.ವೈ ವಿಜಯೇಂದ್ರ

ಶಿವಮೊಗ್ಗ : ನಗರದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್‌ ಆಸ್ಪತ್ರೆಗೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಸಾವರ್ಕರ್‌ ಫ್ಲೆಕ್ಸ್‌ ನಿಂದ ಗಲಾಟೆ ನಡೆದಿದ್ದು, ಅದನ್ನ ಖಂಡಿಸುತ್ತೇನೆ. ಇತಿಹಾಸ ಗೊತ್ತಿಲ್ಲದ ಕೆಲ ಪುಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ ಎಂದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಚಾರ ಮಾಡಿದ್ದಾರೆ. ದೇಶದ ಸ್ವಾಭಿಮಾನಿ ಭಾರತೀಯರಿಗೆ ನೋವಾಗಿದೆ. ಮಂಗಳೂರು ಮತ್ತು ಶಿವಮೊಗ್ಗದಲ್ಲಿ ಇದು ಪುನರಾವರ್ತನೆ ಆಗುತ್ತಿದೆ ಎಂದರು.

ಇನ್ನು ಇದರ ಹಿಂದೆ ಶಾಂತಿ ಕೆಡಿಸುವ ದೊಡ್ಡ ಪಿತೂರಿ ಇದೆ. ನಿನ್ನೆ ಮೊನ್ನೆ ಕ್ರಿಕೆಟ್‌ ಆಡಿಕೊಂಡಿದ್ದವರು ಚಾಕು ಹಿಡಿದಿದ್ದಾರೆ. ನಮ್ಮ ಸರ್ಕಾರ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಇದರ ಹಿಂದೆ ಯಾವ ಸಂಘಟನೆ ಇದೆ ಎಂದು ಹೇಳಲ್ಲ. ಅದು ಎಲ್ಲರಿಗೂ ತಿಳಿದಿರುವ ಸೀಕ್ರೆಟ್‌ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments