Monday, August 25, 2025
Google search engine
HomeUncategorizedಗುಲಾಂ ನಬಿ ಆಜಾದ್ ರಾಜೀನಾಮೆ ನಿರೀಕ್ಷಿಸಿರಲಿಲ್ಲ: ಸಿಎಂ ಅಶೋಕ್ ಗೆಹ್ಲೋಟ್

ಗುಲಾಂ ನಬಿ ಆಜಾದ್ ರಾಜೀನಾಮೆ ನಿರೀಕ್ಷಿಸಿರಲಿಲ್ಲ: ಸಿಎಂ ಅಶೋಕ್ ಗೆಹ್ಲೋಟ್

ನವದೆಹಲಿ: ಕಾಂಗ್ರೆಸ್​ ಪಕ್ಷದಲ್ಲಿ ಗುಲಾಂ ನಬಿ ಆಜಾದ್ ಉನ್ನತ ಹುದ್ದೆಗಳನ್ನ ವಹಿಸಿದ್ದರು. ಪಕ್ಷ ಅವರನ್ನು ಗೌರವಿಸಿತ್ತು. ಆದರೆ ಗುಲಾಂ ನಬಿ ಆಜಾದ್ ಅವರ ರಾಜೀನಾಮೆಯನ್ನ ನಾವು ನಿರೀಕ್ಷೆ ಮಾಡಿರಲಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪತ್ರದ ಬಗ್ಗೆ ನನಗೆ ಏನು ಹೇಳಬೇಕೆಂಬ ಪದಗಳಿಲ್ಲ. ಪಕ್ಷದ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಈ ರೀತಿಯಲ್ಲಿ ರಾಜೀನಾಮೆ ಪತ್ರ ಬರೆಯುತ್ತಾರೆಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದರು.

ಈ ಹಿಂದೆ ಸೋನಿಯಾ ಗಾಂಧಿ ಅವರು ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋದಾಗ ಅವರಿಗೆ ಆಜಾದ್ ಅವರು ಪತ್ರ ಬರೆದಿದ್ದರು. ಕಾಂಗ್ರೆಸ್ ಗುಲಾಂ ನಬಿ ಆಜಾದ್ ಅವರಿಗೆ ಎಲ್ಲವನ್ನೂ ನೀಡಿದೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿಯಿಂದಾಗಿ ಪ್ರಸಿದ್ಧ ನಾಯಕರಾಗಿದ್ದವರು. ಈ ರೀತಿ ರಾಜೀನಾಮೆ ನೀಡಬಾರದಿತ್ತು ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments