Wednesday, August 27, 2025
HomeUncategorizedಭಾರತವು ಶಾಂತಿಯನ್ನೇ ಬಯಸುತ್ತಿದೆ- S. ಜೈಶಂಕರ್​​​

ಭಾರತವು ಶಾಂತಿಯನ್ನೇ ಬಯಸುತ್ತಿದೆ- S. ಜೈಶಂಕರ್​​​

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ S. ಜೈಶಂಕರ್​​​​​​, ರಷ್ಯಾ- ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಉಂಟಾದ ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತವು ಶಾಂತಿಯ ಪರವಾಗಿದ್ದು, ಶಾಂತಿಯನ್ನೇ ಬಯಸುತ್ತಿದೆ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯ ನಿರ್ಬಂಧಗಳಿಂದ ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಕಾಪಾಡುತ್ತಿರುವ ಚೀನಾವನ್ನು ಜೈಶಂಕರ್ ಟೀಕಿಸಿದ್ದಾರೆ.

ವಿಶ್ವಸಂಸ್ಥೆಯು ಭಯೋತ್ಪಾದನೆಗೆ ಪ್ರತಿಕ್ರಿಯಿಸುವ ಮೂಲಕ ಅದರ ಅಪರಾಧಿಗಳನ್ನು ಖಂಡಿಸುತ್ತದೆ. ಕೆಲವೊಮ್ಮೆ ಕೆಲವರು ಘೋಷಿತ ಭಯೋತ್ಪಾದಕರನ್ನು ರಕ್ಷಿಸುತ್ತಾರೆ, ಅವರು ಭಯದಿಂದ ಹಾಗೆ ಮಾಡುತ್ತಾರೆ. ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಯ ಭಾರವನ್ನು ಹೊತ್ತಿರುವ ಭಾರತವು ‘ಶೂನ್ಯ-ಸಹಿಷ್ಣುತೆ’ ವಿಧಾನವನ್ನು ದೃಢವಾಗಿ ಪ್ರತಿಪಾದಿಸುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ. ಉಕ್ರೇನ್ ಸಂಘರ್ಷ ತೀವ್ರಗೊಳ್ಳುತ್ತಿರುವಾಗ ನಾವು ಯಾರ ಪರವಾಗಿರುತ್ತೇವೆ ಎಂದು ನಮ್ಮನ್ನು ಆಗಾಗ್ಗೆ ಕೇಳಲಾಗುತ್ತದೆ.

ನಮ್ಮ ಉತ್ತರವು ಪ್ರತಿ ಬಾರಿಯೂ ನೇರ ಮತ್ತು ಪ್ರಾಮಾಣಿಕವಾಗಿರುತ್ತದೆ. ಭಾರತವು ಶಾಂತಿಯ ಪರವಾಗಿದ್ದು, ಅದೇ ನಿಲುವಿನಲ್ಲಿ ದೃಢವಾಗಿದೆ ಎಂದು ವಿದೇಶಾಂಗ ಸಚಿವರು ಹೇಳಿದರು. ನಾವು UN ಚಾರ್ಟರ್ ಮತ್ತು ಅದರ ಸಂಸ್ಥಾಪಕ ತತ್ವಗಳನ್ನು ಗೌರವಿಸುವ ಪಕ್ಷದಲ್ಲಿದ್ದೇವೆ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments