Tuesday, August 26, 2025
Google search engine
HomeUncategorizedಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಆಗಲಿ : ಯು.ಟಿ.ಖಾದರ್

ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಆಗಲಿ : ಯು.ಟಿ.ಖಾದರ್

ಮಂಗಳೂರು : ದೇಶದಲ್ಲಿ ಶಾಂತಿ ಸಾಮರಸ್ಯ ಹದಗೆಡೋ ಯಾವುದೇ ಸಂಘಟನೆ ವಿರುದ್ದ ಕ್ರಮ ಆಗಬೇಕು ಎಂದು ಮಂಗಳೂರಿನಲ್ಲಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರದ ಜವಾಬ್ದಾರಿ, ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಕ್ರಮ ಆಗಲಿ. ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಆಗಲಿ. ತಾರತಮ್ಯ ಮಾಡದೇ ಸದುದ್ದೇಶದಿಂದ ಕ್ರಮ ಆಗಲಿ. ಒಂದು ಕ್ರಮದ ಮೂಲಕ ಭವಿಷ್ಯದಲ್ಲಿ ಸಮಾಜದಲ್ಲಿ ಅಶಾಂತಿ ಕಡಿಮೆಯಾಗಬೇಕು. ಉತ್ತಮ ಸಮಾಜ ನಿರ್ಮಾಣ ‌ಮಾಡಲು ಕ್ರಮಗಳು ಅಗತ್ಯ. ಬ್ಯಾನ್ ಮಾಡುವ ವಿಚಾರದಲ್ಲಿ ಕಾನೂನು ಮತ್ತು ಕೋರ್ಟ್ ಅದನ್ನ ‌ನೋಡುತ್ತೆ ಎಂದರು.

ಇನ್ನು, ಸಮಾಜ ಒಡೆಯುವ ಯಾವುದೇ ಸಂಘಟನೆಗಳ ಮೇಲೆ ‌ಕ್ರಮ ಆಗಲಿ. ಯಾವುದೇ ಸಂಘಟನೆಗಳನ್ನ ಸಮಾಜದಲ್ಲಿ ‌ಹೇಗೆ ಬಿಂಬಿಸ್ತಾರೆ ಗೊತ್ತಿಲ್ಲ. ಅಂತಹ ಯಾವುದೇ ಮಾಹಿತಿ ನನಗಿಲ್ಲ. ಸಮಾಜದ ಬಹುತೇಕ ಜನರಿಗೆ ಪ್ರೀತಿ, ಸೌಹಾರ್ದತೆಬೇಕು. ರಾಜಕೀಯವಾಗಿ ಯಾವ ಪರಿಣಾಮ ಅಗುತ್ತೆ ಅನ್ನೋದು ನನಗೆ ಗೊತ್ತಿಲ್ಲ. ಸಾಕ್ಷ್ಯಧಾರ‌ ಇದ್ದಲ್ಲಿ ತಾರತಮ್ಯ ‌ಮಾಡದೇ ಕ್ರಮ ತೆಗೆದುಕೊಳ್ಳಬೇಕು. ಕೋಮುದ್ವೇಷದ ಆಧಾರದಲ್ಲಿ ಆದ ಕೊಲೆಗಳು ಸಮಾಜದಲ್ಲಿ ಆಗ್ತಾ ಇದೆ. ಸತ್ತಾಗಲೂ ಪರಿಹಾರ ಕೋಡೋದ್ರಲ್ಲಿ ತಾರತಮ್ಯ ಆಗ್ತಿದೆ. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಸಮಾನತೆಯ ಕ್ರಮ ಆಗಬೇಕು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments