Site icon PowerTV

KSRTC – ದ್ವಿಚಕ್ರ ವಾಹನ ಡಿಕ್ಕಿ ವಿದ್ಯಾರ್ಥಿ ಸಾವು

ತುಮಕೂರು : ತಡರಾತ್ರಿ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಚಿಕ್ಕೋನಹಳ್ಳಿ ಗೇಟ್ ನ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಘಟನೆಯೊಂದು ನಡೆದಿದ್ದು ಮುದಿಗೇರೆ ತಾಲೂಕಿನ ವಿದ್ಯಾರ್ಥಿ ಶಶಿಧರ್ (19) ಮೃತ ದುರ್ದೈವಿ. ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಕೆಎಸ್ಆರ್ಟಿಸಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಾಲಾಗಿದೆ.

Exit mobile version