Thursday, August 28, 2025
HomeUncategorizedಪ್ರಸಿದ್ಧ ದೇವಾಲಯದ ಆನೆ ಹಠಾತ್​ ನಿಧನ

ಪ್ರಸಿದ್ಧ ದೇವಾಲಯದ ಆನೆ ಹಠಾತ್​ ನಿಧನ

ಪುದುಚೇರಿ : ಇಲ್ಲಿನ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕ ದೇಗುಲಕ್ಕೆ ಸೇರಿದ್ದ ಆನೆಯೊಂದು ವಿಹರಿಸುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಬುಧವಾರ ಮೃತಪಟ್ಟಿದೆ.

ಲಕ್ಷ್ಮಿ ಎಂಬ ಹೆಸರಿನ ಆನೆಯನ್ನು ಕೈಗಾರಿಕೋದ್ಯಮಿಯೊಬ್ಬರು 1995ರಲ್ಲಿ ದೇವಸ್ಥಾನಕ್ಕೆ ದಾನ ಮಾಡಿದರು ಮತ್ತು ಈ ಆನೆಯ ಆಶೀರ್ವಾದವನ್ನು ಪಡೆಯಲು ವಿದೇಶಿ ಭಕ್ತರು ಕೂಡ ಬರುತ್ತಿದ್ದರು. ಆನೆಯನ್ನು ನೋಡಿಕೊಳ್ಳುತ್ತಿದ್ದ ಸರ್ಕಾರದ ಪಶುವೈದ್ಯರು ಸ್ಥಳದಲ್ಲಿ ಹಾಜರಿದ್ದು, ಆನೆ ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ಹೇಳಿದೆ. ಆನೆಯ ಆರೋಗ್ಯ ಉತ್ತಮವಾಗಿತ್ತು, ಯಾವುದೇ ತೊಂದರೆ ಇರಲಿಲ್ಲ ಎಂದು ಅವರು ಪಿಟಿಐಗೆ ತಿಳಿಸಿದರು.

ಸರ್ಕಾರಿ ಕಾಲೇಜೊಂದರ ಸಮೀಪದ ರಸ್ತೆಯಲ್ಲಿ ಆನೆ ಕುಸಿದು ಮೃತಪಟ್ಟಿದ್ದಾರೆ. ಬಳಿಕ ಮುತ್ಯಾಲಪೇಟೆಯಲ್ಲಿರುವ ದೇವಸ್ಥಾನಕ್ಕೆ ಸೇರಿದ ವಿಸ್ತಾರವಾದ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ. ಆನೆಯ ಸಾವಿನ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅನೇಕ ಕಡೆಗಳಿಂದ ಜನರು ಆನೆ ಕೊನೆಯ ದರ್ಶನ ಪಡೆಯಲು ಆಗಮಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments