Site icon PowerTV

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸಿದ ಅಭಿಮಾನಿಗಳು

ಮೈಸೂರು: ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಅನಾರೋಗ್ಯ ಹಿನ್ನೆಲೆಯಲ್ಲಿ ಬೇಗ ಗುಣಮುಖರಾಗಲೇಂದು ಮೈಸೂರಿನ ನೂರೊಂದು ಗಣಪತಿ ದೇವಾಲಯದಲ್ಲಿ ಅಭಿಮಾನಿಗಳ ಪ್ರಾರ್ಥನೆ ನಡೆಸಿದರು.

ಸಿದ್ದರಾಮಯ್ಯನವರು ಆರೋಗ್ಯವಾಗಿ ಆಸ್ಪತ್ರೆಯಿಂದ ಹಿಂದಿರುಗಲಿ. ಅವರ ಆರೋಗ್ಯ ಸುಧಾರಿಸಲಿ ಎಂದು ಅಗ್ರಹಾರದ ನೂರೊಂದು ಗಣಪತಿ ದೇವಾಲಯದಲ್ಲಿ ದೇವರಿಗೆ ಅರ್ಚನೆ ಮಾಡಿ ಅಭಿಮಾನಿಗಳು ಪ್ರಾರ್ಥಿಸಿದರು.

ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರನ್ನು ನೋಡುವ ಬಯಕೆಯಲ್ಲಿದ್ದೇವೆ. ಅವರು ಬೇಗ ಚೇತರಿಸಿಕೊಂಡು ಆರೋಗ್ಯವಾಗಿ ಹಿಂದಿರುಗಲಿ ಎಂದು ಈ ವೇಳೆ ಅಭಿಮಾನಿಗಳು ಹಾರೈಸಿದರು.

Exit mobile version