Saturday, August 23, 2025
Google search engine
HomeUncategorizedಸುಮಲತಾ ನಿಂತ್ರೂ ನಾನ್ ಮಂಡ್ಯದಲ್ಲಿ ನಿಲ್ಲಲ್ಲ : ಎಚ್.ಡಿ ಕುಮಾರಸ್ವಾಮಿ

ಸುಮಲತಾ ನಿಂತ್ರೂ ನಾನ್ ಮಂಡ್ಯದಲ್ಲಿ ನಿಲ್ಲಲ್ಲ : ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಮರಳಿ ಮಂಡ್ಯದಲ್ಲಿ ಸ್ಪರ್ಧೆ ಮಾಡಿದರೂ ನಾನು ಮಂಡ್ಯದಲ್ಲಿ ಸ್ಪರ್ಧಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸುತ್ತೇನೆ. ನಾನು ನಿಲ್ಲುತ್ತೇನೆ ಅನ್ನೋದು ಬರೀ ಊಹಾಪೋಹ. ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಾರದರ್ಶಕ ಚುನಾವಣೆ ಅನುಮಾನ

ರಾಜ್ಯ ಬಿಜೆಪಿ ಸರ್ಕಾರ 2.35 ಲಕ್ಷ ಕುಟುಂಬಕ್ಕೆ ಹಣ ಕೊಟ್ಟಿಲ್ಲ. ಬಿಜೆಪಿ ನಾಯಕರು ಸಮಾವೇಶಕ್ಕೆ ಜನ ಕರೆತರಲು ಜಿಲ್ಲಾಧಿಕಾರಿ, ಅಧಿಕಾರಿಗಳಿಗೆ ಜವಾಬ್ದಾರಿ ಕೊಡುತ್ತಾರೆ. ಈ ಬಾರಿ ಪಾರದರ್ಶಕ ಚುನಾವಣೆ ಅನುಮಾನ. ನಾವು ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಮನವಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಅವರ ರಾಜಕೀಯ ನಿವೃತ್ತಿ!

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಅಂತಾ ಗೊತ್ತಿದೆ. ಅವರ ನಿರ್ಧಾರಗಳೇ ಅವರನ್ನು ರಾಜಕೀಯದಿಂದ ನಿವೃತ್ತಿ ಮಾಡುತ್ತವೆ. ಅವರಿಗೆ ಗೊತ್ತು ಅವರಿಗೆ ಅಧಿಕಾರಕ್ಕೆ ಬರುವುದಿಲ್ಲ ಅಂತ, ಅದೇ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ಕುಟುಕಿದ್ದಾರೆ.

ಸಿದ್ದು ಭಾಗ್ಯ ಮುಂದುವರಿಸಿದ್ದು ನಾನು

ಕಾಂಗ್ರೆಸ್​ ಮುಖಂಡರು ನೀಡುತ್ತಿರುವುದು ಗ್ಯಾರಂಟಿ ಕಾರ್ಡ್​ ಅಲ್ಲ, ಡೂಪ್ಲಿಕೇಟ್ ಕಾರ್ಡ್. ಹೀಗಾಗಿ ಕಾಂಗ್ರೆಸ್​, ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡುವುದಿಲ್ಲ. ಟೀಕೆಯಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಕೇವಲ 37 ಶಾಸಕರನ್ನು ಇಟ್ಟುಕೊಂಡೇ ನಾನು ಕೆಲಸ ಮಾಡಿದೆ. ಕಾಂಗ್ರೆಸ್​​ನ ಎಲ್ಲ ಭಾಗ್ಯಗಳನ್ನು ಮುಂದುವರಿಸಿ ರೈತರ ಸಾಲಮನ್ನಾ ಮಾಡಿದೆ ಎಂದು ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಬಂದಾಗ ಗೊತ್ತಾಗುತ್ತದೆ. ಅಲ್ಲಿಯವರೆಗೂ ಅಂತೆ ಕಂತೆ ಇರುತ್ತದೆ. ನಾನು ಜನತೆ ಬಳಿ ಹೋಗಿ ನೋಡಿದ್ದೇನೆ. ನನಗೆ ಯಾವುದೇ ಆತಂಕ ಇಲ್ಲ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments