Site icon PowerTV

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಕುಮಾರಸ್ವಾಮಿ : ‘ದಳಪತಿ’ ಭರಪೂರ ಕೊಡುಗೆಗಳೇನು?

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಜೆಡಿಎಸ್​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಜೆಡಿಎಸ್​ ಸರ್ಕಾರ ಈ ಬಾರಿ ರಚನೆಯಾದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ, ರೈತರಿಗೆ ಹಾಗೂ ಆಟೋ ಚಾಲಕರು ಸೇರಿದಂತೆ ಎಲ್ಲರಿಗೂ ಭರಪೂರ ಕೊಡುಗೆ ನೀಡುವ ಭರವಸೆ ನೀಡಿದ್ದಾರೆ.

ಪ್ರಮುಖವಾಗಿ ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ ರೂ. ನೀಡುತ್ತೇವೆ ಎಂಬ ಭರವಸೆ ನೀಡಿರುವ ಕುಮಾರಸ್ವಾಮಿ ಅವರು, ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ.

ಒಟ್ಟು 9 ವಿಭಾಗಗಳಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಜೆಡಿಎಸ್‌ ಬಿಡುಗಡೆ ಮಾಡಿದ್ದು, ಸಾಮಾಜಿಕ ಭದ್ರತೆಗಳು, ಪಂಚರತ್ನ ಯೋಜನೆ, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ-ಸಂಪರ್ಕ ಸೇತುವೆಗಳು, ಇಂಧನ ವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಯ ವಿಭಾಗದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ : ನಾನ್ಯಾಕೆ ಸುಮಲತಾ ಬಗ್ಗೆ ಟೀಕೆ ಮಾಡಲಿ : ಎಚ್.ಡಿ ಕುಮಾರಸ್ವಾಮಿ

ಪ್ರಣಾಳಿಕೆಯ ಪ್ರಮುಖ ಅಂಶಗಳು

Exit mobile version