Site icon PowerTV

ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ದಯಾನಂದ ನೇಮಕ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.

ಹೌದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಪ್ರತಾಪ್​ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು
ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ.

Exit mobile version