Site icon PowerTV

ಮರಳು ಅಡ್ಡೆಗಳ ಮೇಲೆ ಶಾಸಕಿ ಕರಿಯಮ್ಮ ದಿಢೀರ್ ದಾಳಿ

ರಾಯಚೂರು: ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಮಾಹಿತಿ ತಿಳಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ (Kariyamma Nayak) ಅವರು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಹೌದು, ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ದಂಧೆ (Sand Mining) ನಡೆಸಲಾಗುತ್ತಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಶಾಸಕಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಗೆಲ್ಲಲು ಶಾಸಕರಿಗೆ ಟಾಸ್ಕ್ ಕೊಟ್ಟ ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಇನ್ನೂ ಸ್ಥಳಕ್ಕೆ ಆಗಮಿಸಿದ ದೇವದುರ್ಗ (Devadurga) ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ, ಮೂರು ಟಿಪರ್​​ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಲು ಸೂಚನೆ

ಮರಳು ದಂಧೆಯಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರಿಯಮ್ಮ ನಾಯಕ್ ಸೂಚನೆ ನೀಡಿದ್ದಾರೆ

ಮಾಜಿ ಶಾಸಕ ಶಿವನಗೌಡ ನಾಯಕ್​ಗೆ ಕರಿಯಮ್ಮ ಪರೋಕ್ಷವಾಗಿ ಟಾಂಗ್

ಮರಳು ಟಿಪ್ಪರ್ ಅಡ್ಡಹಾಕಿದ ಬಗ್ಗೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್, ನನ್ನನ್ನ ಲಾರಿ ಹತ್ತಿಸಿ ಸಾಯಿಸುತ್ತೇನೆ ಅಂತಾರೆ. ತಾಕತ್ ಇದ್ದರೆ ಬನ್ನಿ, ಇಲ್ಲೆ ಇರುತ್ತೇನೆ ಬಂದು ಕೊಲ್ಲಿ ಅಂತ ಚಾಲೆಂಜ್ ಹಾಕಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕರಿಗೆ (ಶಿವನಗೌಡ ನಾಯಕ್)ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಅಲ್ಲದೆ, ಅಧಿಕಾರಿಗಳೇ ಅಕ್ರಮ ಮರಳು ದಂಧೆಗೆ ಹೊಣೆಗಾರರಾಗಿದ್ದು, ಈ ಸಂಬಂಧ ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

Exit mobile version