ಬೆಂಗಳೂರು : ನಟ ಸುದೀಪ್ ಬರೀ ನಟನೆಗಷ್ಟೇ ಅಲ್ಲ, ತಮ್ಮ ಸಮಾಜಮುಖಿ ಕೆಲಸಗಳಿಂದಲೂ ಹೆಸರಾದವರು. ಸಂಕಷ್ಟದಲ್ಲಿರುವ ನೂರಾರು ಜನರಿಗೆ ತಮ್ಮದೇ ರೀತಿಯಲ್ಲಿ ಸಹಾಯಹಸ್ತ ಚಾಚಿದವರು.
ಮಹಿಂದರ್ ಮತ್ತು ಸುರೇಖಾ ರಾಣಿ ಅವರ ಮಗಳಾದ ಸಾಕ್ಷಿ, ಚಾಮರಾಜಪೇಟೆಯಲ್ಲಿರುವ ಶ್ರೀ ಶಂಕರ ಕ್ಯಾನ್ಸರ್ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆ ಸುದೀಪ್ ಅವರ ಅಭಿಮಾನಿ. ರನ್ನ ಚಿತ್ರದ ‘ತಿತಲಿ’ ಹಾಡು ಎಂದರೆ ಆಕೆಗೆ ಬಹಳ ಅಚ್ಚುಮೆಚ್ಚು.
ಇದನ್ನೂ ಓದಿ : ಹಾಲಿನ ಪುಡಿಯಲ್ಲೂ ದಂಧೆ ಶುರು ಮಾಡಿದ್ದೀರಾ? : ಬಿಜೆಪಿ ಕಿಡಿ
ಗಂಭೀರ ಸ್ಥಿತಿಯಲ್ಲಿರುವ ಸಾಕ್ಷಿ, ತನ್ನ ನೆಚ್ಚಿನ ನಟ ಸುದೀಪ್ ಅವರನ್ನು ಭೇಟಿ ಮಾಡುವ ಆಸೆ ವ್ಯಕ್ತಪಡಿಸಿದ್ದಳು. ಈ ವಿಷಯ ಸುದೀಪ್ ಅವರ ಕಿವಿಗೂ ಬಿದ್ದಿತ್ತು.
ತಡ ಮಾಡದೆ ಇಂದು ಬೆಳಿಗ್ಗೆ ಶಂಕರ ಆಸ್ಪತ್ರೆಗೆ ಆಗಮಿಸಿದ ಸುದೀಪ್, ಆಕೆಯ ಜೊತೆಗೆ ಸ್ವಲ್ಪ ಸಮಯ ಕಳದಿದ್ದಾರೆ. ಆಕೆಗೆ ಆಟೋಗ್ರಾಫ್ ನೀಡಿ ಮನಸ್ಸು ಸಂತೋಷಪಡಿಸಿದ್ದಾರೆ. ಆಕೆಯ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ್ದಾರೆ. ತನ್ನನ್ನು ಭೇಟಿ ಮಾಡಿ ಶುಭ ಹಾರೈಸಿರುವ ಸುದೀಪ್ ಅವರನ್ನು ನೋಡಿ ಸಾಕ್ಷಿ ಬಹಳ ಖುಷಿಯಾಗಿದ್ದಾಳೆ.