Site icon PowerTV

ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ : ಯತ್ನಾಳ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ.ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ.

ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಮಾಡಿದ ಅವರು ಸರ್ಕಾರದ ಮೇಲೆ ಆರೋಪವನ್ನು ಮಾಡಿದ್ದಾರೆ. ನನಗೆ ಈ‌ ಸರ್ಕಾರದ ಮೇಲೆ ವಿಶ್ವಾಸವಿಲ್ಲ. ಜೈನ ಮುನಿ ಹತ್ಯೆ ಪ್ರಕರಣದ ಈ ಘಟನೆಯನ್ನ ಸಿಬಿಐ ತನಿಖೆಗೆ ಕೊಡಬೇಕು ಎಂದರು.

ಇದನ್ನೂ ಓದಿ: ಸರಿ.. ದುಡ್ಡು ಕೊಟ್ರೂ ಎಷ್ಟು ಕೊಡ್ತಿದೀರಿ? : ಬೊಮ್ಮಾಯಿ ಗುಡುಗು

ಕರ್ನಾಟಕದಲ್ಲಿ ಮುನಿಗಳಿಗೆ ಸಂತರಿಗೆ ರಕ್ಷಣೆ ಇಲ್ಲದಿದ್ದರೆ ಹೇಗೆ? ಹಣಕಾಸು ವ್ಯವಹಾರ ಎಂಬುವುದು ಒತ್ತಡದಿಂದ ಪೊಲೀಸರು ಸೃಷ್ಟಿ ಮಾಡಿದ್ದಾರೆ.

ಈಗ ಭಯದ ವಾತಾವರಣ ರಾಜ್ಯದಲ್ಲಿ ನಿರ್ಮಾಣ ಆಗಿದೆ. ಈ ಸರ್ಕಾರ ಬಂದ ಬಳಿಕ ಎಲ್ಲೆಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ. ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹಿಂದೂಗಳು‌ ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ ಎಂದು ಆರೋಪಿಸಿದರು.

Exit mobile version