Site icon PowerTV

ಉಯ್ಯಾಲೆ ಹಗ್ಗಕ್ಕೆ ಸಿಲುಕಿ ಬಾಲಕ ಸಾವು

ಮಂಗಳೂರು : ಉಯ್ಯಾಲೆ (ಜೋಕಾಲಿ)ಯಲ್ಲಿ ಆಡುತ್ತಿದ್ದ ಬಾಲಕನ ಕತ್ತಿಗೆ ಹಗ್ಗ ಸುತ್ತಿಕೊಂಡು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.

ಶ್ರೀಶ (14) ಮೃತಪಟ್ಟ ಬಾಲಕ. ಈತನು 8ನೇ ತರಗತಿ ಓದುತ್ತಿದ್ದ. ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಬಾಲಕ ನೆಲದಲ್ಲಿ ಬಿದ್ದಿದ್ದ. ಇದನ್ನು ಕಂಡ ಪೋಷಕರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಸೀರೆಯಲ್ಲಿ ಮಾಡಿದ ಉಯ್ಯಾಲೆ‌ಯಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Exit mobile version