Saturday, August 23, 2025
Google search engine
HomeUncategorizedಈ ಬಾರಿ ಮೋದಿಗೆ ಮೆಜಾರಿಟಿ ಸಿಗೋದಿಲ್ಲ : ಸಿದ್ದರಾಮಯ್ಯ

ಈ ಬಾರಿ ಮೋದಿಗೆ ಮೆಜಾರಿಟಿ ಸಿಗೋದಿಲ್ಲ : ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ಪ್ರಧಾನಿ ನರೇಂದ್ರ ಮೋದಿಗೆ ಮೆಜಾರಿಟಿ ಸಿಗೋದಿಲ್ಲ. ಅವರು ಸೋಲ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾಂತದ ಬಗ್ಗೆ ಅವರಿಗೆ ಈಗ ಅರಿವಾಯ್ತಾ? ಎಂದು ಕಿಡಿಕಾರಿದರು.

ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಎಂಬ ಹೆಚ್.ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿ, ಅವರನ್ನೆಲ್ಲಾ ಕರೆದಿದ್ದವರು ಯಾರು? ಅದನ್ನು ಮುಂದುವರೆಸಿದ್ರಾ? ಅವರು ಬಂದು ಇನ್ವೈಟ್ ಮಾಡಿದ್ರು, ಅದನ್ನು ಮುಂದುವರೆಸಲಿಲ್ಲ. ಅಲ್ಲಿಗೆ ನಿಂತೋಯ್ತು. ಅವರೆಲ್ಲಾ ಬಂದಿದ್ರು, ಹೋದ್ರು ಎಂದು ಛೇಡಿಸಿದರು.

ಇದನ್ನೂ ಓದಿ : ನಾನು ವಿಪಕ್ಷ ಸ್ಥಾನಕ್ಕೆ ಟವೆಲ್ ಹಾಕಿದ್ದೇನಂತೆ : ಹೆಚ್.ಡಿ ಕುಮಾರಸ್ವಾಮಿ

ಜೆಡಿಎಸ್​ಗೆ ಸಿದ್ಧಾಂತವೇ ಇಲ್ಲ

ಜೆಡಿಎಸ್ ಪಕ್ಷಕ್ಕೆ ಸಿದ್ಧಾಂತವೇ ಇಲ್ಲ. ಬಿಜೆಪಿ ಜೊತೆಗೆ ಹೋದರೂ ಜಾತ್ಯಾತೀತನಾ? ನಿತೀಶ್ ಕುಮಾರ್ ಸಿದ್ದಾಂತ ವಿಚಾರ ಅವರಿಗೆ ಯಾಕೆ ಬೇಕು. ಅವರ ವಿಚಾರ ಬೇಡ ಎಂದು ಹೆಚ್​ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ಇದು ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಯುತ್ತಿದೆ. ಸುಮಾರು 24 ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. ಎಲ್ಲಾ ವಿಪಕ್ಷ ನಾಯಕರು ಕೂಡ ಭಾಗಿಯಾಗುತ್ತಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ ಚರ್ಚೆ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟುಗೂಡಿ ಚುನಾವಣೆ ನಡೆಸಬೇಕು ಅನ್ನೋದು ಅಜೆಂಡಾ. ಹಾಗಾಗಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments