Site icon PowerTV

ಸಿದ್ರಾಮಣ್ಣ ಮೊದಲಿನ ತರ ಸಿಡಿದೇಳುತ್ತಿಲ್ಲ : ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಇವಾಗ ವರಿಷ್ಠರು ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಕಪ್ಪ ಕಾಣಿಕೆ ಕೊಡೋದು ಹೊಸದಲ್ಲ

ಕಾಂಗ್ರೆಸ್​ ಸರ್ಕಾರದಲ್ಲಿ ಹೈಕಮಾಂಡ್​ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ. ಸರ್ಕಾರದ ರಿಮೋಟ್ ಹೈಕಮಾಂಡ್ ಕೈಯಲ್ಲಿದೆ. ನಿನ್ನೆಯ ಸಭೆಯಲ್ಲಿ ಕಪ್ಪ ಕಾಣಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಡಿದು ಕಪ್ಪ ಕಾಣಿಕೆ ಹೈಕಮಾಂಡ್​ಗೆ ಕೊಡೋದು ಹೊಸದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದು ರಾಜ್ಯದ ಜನರಿಗೆ ಅವಮಾನ

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ಬಗ್ಗೆ ನಮ್ಮ ಅಭ್ಯಂತರ ಇಲ್ಲ. ಆದರೆ, ಸಚಿವ ಸಂಪುಟವೇ ಹೋಗಿ ಸಭೆ ಮಾಡುವುದು ಸರಿಯಲ್ಲ. ರಾಜ್ಯದ ಜನರು ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಕರ್ನಾಟಕದ ಜನರಿಗೆ ಇದು ಅವಮಾನ ಮಾಡಿದಂತಾಗುತ್ತದೆ ಎಂದು ಬೇಸರಿಸಿದ್ದಾರೆ.

Exit mobile version