ಬೆಂಗಳೂರು : ಸಭೆ ನಡೆಸದೇ ತಮಿಳುನಾಡಿಗೆ ಏಕಾಏಕಿ ನೀರು ಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ನಡೆ ವಿರುದ್ಧ ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಗುಡುಗಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಹಿನ್ನೆಲೆ ಸುಪ್ರೀಂಕೋರ್ಟ್ ಹಾಗೂ ಕೇಂದ್ರದ ಜಲ ಆಯೋಗದ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ವಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ ಯಡಿಯೂರಪ್ಪ ಅವರು ಸರ್ಕಾರದ ನಡೆ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಈ ಸಭೆಯನ್ನು ತಮಿಳುನಾಡಿಗೆ ನೀರು ಬಿಡುವ ಮುನ್ನವೇ ಕರಿಯಬೇಕಿತ್ತು. ಆದರೆ, ನೀರು ಬಿಟ್ಟ ಮೇಲೆ ಈ ಸಭೆಯನ್ನು ಕರಿದಿದ್ದೀರಿ. ಅಷ್ಟೇ ಅಲ್ಲ ರಾಜ್ಯದಲ್ಲಿ ಮುಂಗಾರು ಅವಧಿ ಮುಗಿಯುತ್ತಿದ್ದು, ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಮಟ್ಟ ಕೂಡ ಕಡಿಮೆ ಇದೆ. ತಮಿಳುನಾಡಿನಲ್ಲಿ ಮುಂಗಾರು ಅವಧಿ ಇನ್ನೂ ಇದೆ. ಆದರೂ ಅವರಿಗೆ ನೀರು ಬಿಟ್ಟಿದ್ದೀರಾ ಎಂದು ತರಾಟೆ ತೆಗೆದುಕೊಂಡಿದ್ದಾರೆ.
ಇದನ್ನು ಓದಿ : ಮೋದಿ ಮತ್ತೆ ಪ್ರಧಾನಿ ಆಗಲ್ಲ.. ಬಿಜೆಪಿ ಬರಲ್ಲ : ಬಿಜೆಪಿ ಸಂಸದರ ಎಡವಟ್ಟು
ಸುಪ್ರೀಂಕೋರ್ಟ್ ಹಾಗೂ ಪ್ರಾಧಿಕಾರದ ಮುಂದೆ ಸರಿಯಾದ ವಾದವನ್ನು ಮಂಡಿಸಬೇಕಿತ್ತು. ಆಗ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕೋರ್ಟ್ ಮುಂದೆ ಇಗಲಾದರೂ ಎಲ್ಲ ವಿಚಾರ ತಿಳಿಸಿ ಎಂದು ಸರ್ಕಾರಕ್ಕೆ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಬಿಎಸ್ವೈ ಮಾತಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಧ್ವನಿಗೂಡಿಸಿದ್ದಾರೆ.



Pinco slot maşınları çox maraqlıdır. Ən son bonuslar və kampaniyalar üçün pinco azerbaycan səhifəsinə bax. Pinco azerbaycan səhifəsi daim aktivdir.
Pinco oyunçular üçün yardım mövcuddur.