Friday, September 12, 2025
HomeUncategorizedರೇಣುಕಾಚಾರ್ಯಗೆ ಟೀ ಕುಡಿಸಿ ಕಳುಹಿಸಿದ್ದೇನೆ : ಸಚಿವ ಮಲ್ಲಿಕಾರ್ಜುನ್

ರೇಣುಕಾಚಾರ್ಯಗೆ ಟೀ ಕುಡಿಸಿ ಕಳುಹಿಸಿದ್ದೇನೆ : ಸಚಿವ ಮಲ್ಲಿಕಾರ್ಜುನ್

ದಾವಣಗೆರೆ : ರೇಣುಕಾಚಾರ್ಯ ಅವರು ಬಂದಿದ್ರು, ಟೀ ಕುಡಿಸಿ ಕಳುಹಿಸಿದ್ದೇನೆ. ಬೇರೆ ಏನೂ ಚರ್ಚೆ ಆಗಿಲ್ಲ. ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ ಎಂದು ಸಚಿವ ಎಸ್​.ಎಸ್​ ಮಲ್ಲಿಕಾರ್ಜುನ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೇಣುಕಾಚಾರ್ಯ ಭೇಟಿ ಸೌಹಾರ್ದಯುತವಾಗಿದ್ದು, ಎಲ್ಲರನ್ನೂ ಕಂಡಿದ್ದರು. ನನ್ನ ಬಳಿ ಬಂದಿದ್ದರು, ಟೀ ಕುಡಿದರು. ವಿಶ್ ಮಾಡಿ ಹೋದ್ರು. ಇದಕ್ಕೆ ರಾಜಕೀಯ ಅರ್ಥ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಕ್ಷದ ಬಗ್ಗೆ ಮಾತನಾಡಿದ್ರು, ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಅನ್ಯಾಯ ಮಾಡಿತು ಅಂದ್ರು. ದಾವಣಗೆರೆಯಿಂದ ಲೋಕಸಭೆ ಬಿಜೆಪಿ ಆಕಾಂಕ್ಷಿ ಅಂತ ರೇಣುಕಾಚಾರ್ಯ ಹೇಳಿದ್ರು. ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಇವ್ರು ಚಾರ್ಜ್‌ಶೀಟ್​ನಲ್ಲಿರೋರ ರಕ್ಷಣೆ ಮಾಡ್ತಾರಾ? : ಬೊಮ್ಮಾಯಿ ಕಿಡಿ

ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ

ಡಿ.ಕೆ ಶಿವಕುಮಾರ್ ನನಗೆ ಕರೆ ಮಾಡಿಲ್ಲ, ಗೊತ್ತೂ ಇಲ್ಲ. ಈ ಸಂಬಂಧ ನನಗೆ ಯಾರೂ ಮಾತನಾಡಿಲ್ಲ. ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿಲ್ಲ. ಬೇರೆ ಯಾರಾದರೂ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಎಂದು ಎಸ್​.ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ.

ವರಮಹಾಲಕ್ಷ್ಮೀ ಪೂಜೆಗೆ ಹೋಗಿದ್ರು

ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್​ ಲೋಕಸಭಾ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ಯೋಚನೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ, ಕಾಂಗ್ರೆಸ್ ನಲ್ಲಿ ಬಹಳಷ್ಟು ಜನರಿದ್ದಾರೆ. ದೇವೇಂದ್ರಪ್ಪ ಕುಟುಂಬ ಆಹ್ವಾನ ಮಾಡಿತ್ತು. ಜಗಳೂರಿಗೆ ಪ್ರಭಾ ಮಲ್ಲಿಕಾರ್ಜುನ್ ಹೋಗಿದ್ದರು. ವರಮಹಾಲಕ್ಷ್ಮೀ ಪೂಜೆಗೆ ಆಹ್ವಾನದ ಮೇರೆಗೆ ಹೋಗಿದ್ದರು ಅಷ್ಟೇ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments