Site icon PowerTV

ಕಾವೇರಿ ನೀರಿಗಾಗಿ ಸತ್ತ ಇಲಿಗಳನ್ನು ಬಾಯಲ್ಲಿ ಕಚ್ಚಿ ಪ್ರತಿಭಟನೆ!

ತಮಿಳುನಾಡು : ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಾದ್ಯಂತ ಬಂದ್​ ಮಾಡಿತ್ತು. ಅತ್ತ ತಮಿಳುನಾಡಿನಲ್ಲಿ ರೈತರು ಕರ್ನಾಟಕ ಸರ್ಕಾರ ನೀರನ್ನು ಹರಿಸಬೇಕೆಂದು ಆಗ್ರಹಿಸಿ, ಸತ್ತ ಇಲಿಗಳನ್ನು ತಮ್ಮ ಬಾಯಲ್ಲಿ ಕಚ್ಚಿಕೊಂಡು ಪ್ರತಿಭಟನೆ ನಡೆಸಿರುವುದು ಇದೀಗ ಮುನ್ನೆಲೆಗೆ ಬಂದಿದೆ.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೈತರ ಗುಂಪೊಂದು ಸತ್ತ ಇಲಿಗಳನ್ನು ಬಾಯಿಯಲ್ಲಿ ಕಚ್ಚಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ಕಾವೇರಿ ಸಮಸ್ಯೆ ಪರಿಹಾರಕ್ಕೆ ತಮಿಳುನಾಡು ಸರ್ಕಾರದ ಮನವೊಲಿಸಲಿ: ಬಸವರಾಜ ಬೊಮ್ಮಾಯಿ

ತಮ್ಮ ಅಲ್ಪಾವಧಿ ಬೆಳೆಗೆ ನೀರಿನ ಅಗತ್ಯ ಹೆಚ್ಚಿದೆ. ಹೀಗಾಗಿ ಕರ್ನಾಟಕ ಸರ್ಕಾರ ತಮಗೆ ಕಾವೇರಿ ನೀರನ್ನು ಹರಿಸಬೇಕು ಎಂದು ಈ ಗುಂಪಿನ ರೈತರು ಆಗ್ರಹಿಸಿದ್ದಾರೆ.

Exit mobile version