Thursday, August 28, 2025
HomeUncategorizedಕುಮಾರಸ್ವಾಮಿ ಸತ್ಯಹರಿಶ್ಚಂದ್ರರ ಮೊಮ್ಮಗ : ಎಂ. ಲಕ್ಷ್ಮಣ್

ಕುಮಾರಸ್ವಾಮಿ ಸತ್ಯಹರಿಶ್ಚಂದ್ರರ ಮೊಮ್ಮಗ : ಎಂ. ಲಕ್ಷ್ಮಣ್

ಮೈಸೂರು : ಚುನಾವಣೆ ನಡೆಯುವ ಸಂದರ್ಭದಲ್ಲಿ IT ರೈಡ್ ಮಾಡುವುದು ಹೊಸದೇನಲ್ಲ. ಬೆಂಗಳೂರಿನ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಹಣ ಪತ್ತೆಯಾಗಿದೆ. IT ಅಧಿಕಾರಿಗಳಿಗೆ ನನ್ನದೊಂದು ಪ್ರಶ್ನೆಯಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾಲ್ಕು ಗಂಟೆ ಹಿಂದೆ ಆ ಹಣ ಎಲ್ಲಿತ್ತು? ಯಾವ ಪಕ್ಷದವರು ಯಾರಿಗಾಗಿ ಹಣ ಇಟ್ಟಿದ್ದರು. ನನಗೆ ಬಂದಿರುವ ಮಾಹಿತಿ ಪ್ರಕಾರ ಅಲ್ಲಿ ಸಿಕಿರುವುದು 42 ಕೋಟಿ ಅಲ್ಲ, 200 ಕೋಟಿ. ಸುಖಾಸುಮ್ಮನೆ ಬಿಜೆಪಿ, ಜೆಡಿಎಸ್ ಹಿಟ್ ಅಂಡ್ ರನ್ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಅಲ್ಲಿ ಸಿಕ್ಕಿರುವ ಹಣ ಹಿಂದಿನ ಬಿಜೆಪಿ ಸರ್ಕಾರದ ಪ್ರಬಲ ಸಚಿವರ ಹಣ ಎಂಬ ಮಾಹಿತಿ ಇದೆ. ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಸತ್ಯಹರಿಶ್ಚಂದ್ರರ ಮೊಮ್ಮಗ. ಸುಖಾಸುಮ್ಮನೆ ಎಲ್ಲರ ಮೇಲೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಅವ್ರು ಕುಮಾರಸ್ವಾಮಿಗೆ ಸುಪಾರಿ ಕೊಟ್ಟು ಇಟ್ಟುಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಡಿಕೆಶಿ ಪಾಪುಲ್ಯರಿಟಿ ಸಹಿಸಲಾಗುತ್ತಿಲ್ಲ

ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಒಪ್ಪಂದ ಆಗಿದೆ. ಅದಕ್ಕೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವ್ರ ಪಾಪುಲ್ಯರಿಟಿ ಸಹಿಸಲಾಗದೇ ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ ಎಂದು ಎಂ. ಲಕ್ಷ್ಮಣ್ ವ್ಯಂಗ್ಯವಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments