Site icon PowerTV

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆ: ಸಚಿವ ಈಶ್ವರ್​ ಖಂಡ್ರೆ

ಬೆಂಗಳೂರು: ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆ ಆಹಾರ ಹುಡುಕಿಕೊಂಡು ವನ್ಯಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಮಹಿಳಾ ಅಧಿಕಾರಿಗಳ ಕೊಲೆ ಹೆಚ್ಚಳ!

ಹೀಗಾಗಿ ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ. ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

Exit mobile version