Site icon PowerTV

ಬೆಳಕಿನ ಹಬ್ಬ ದೀಪಾವಳಿಯ ಲಕ್ಷ್ಮೀ ಪೂಜಾ ವಿಧಿ-ವಿಧಾನಗಳು ಹೀಗಿದೆ

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪದ ಹಬ್ಬ ದೀಪಾವಳಿ ಹಬ್ಬ ಆರಂಭವಾಗುತ್ತದೆ. ಈ ಹಬ್ಬವು ಅಜ್ಞಾನವನ್ನು ಕಳೆದು ಜ್ಞಾನ, ಕೆಡುಕಿನ ಮೇಲೆ ಒಳ್ಳೆಯ ಮತ್ತು ಹತಾಶೆಯ ಮೇಲೆ ಭರವಸೆಯ ವಿಜಯವನ್ನು ಸಂಕೇತಿಸುವ ಹಬ್ಬವಾಗಿದೆ ಎಂದು ಸಿದ್ಧಲಿಂಗೇಶ್ವರ ಗದ್ದುಗೆ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ದೀಪಾವಳಿ ಹಬ್ಬದ ಮಹತ್ವ, ಪೂಜಾ ವಿಧಾನ, ಮುಹೂರ್ತಗಳ ಯಾವಗ ಎಂದು ಪವರ್ ಟಿವಿಗೆ ಶ್ರೀಗಳು ಮಾಹಿತಿ ನೀಡಿದ್ದಾರೆ.

ಹಬ್ಬದ ಮಹತ್ವ 

ಭಗವಾನ್ ಕೃಷ್ಣನಿಂದ ನರಕಾಸುರನಂತಹ ಅನೇಕ ರಾಕ್ಷಸರ ವಧೆ, ರಾವಣನನ್ನು ಕೊಂದ ನಂತರ ಅಯೋಧ್ಯೆಗೆ ಭಗವಾನ್ ರಾಮನ ಆಗಮನ ಮತ್ತು ಬಲಿಯನ್ನು ವಾಮನ ಸೋಲಿಸಿದ ದಿನ ಹೀಗೆ ಈ ದೀಪಾವಳಿ ಹಬ್ಬವನ್ನು ಹಲವಾರು ಕಾರಣಕ್ಕೆ ಆಚರಿಸಲಾಗುತ್ತದೆ. ಜನರು ಲಕ್ಷ್ಮೀಯನ್ನು ಮಾಡುವ ಮೂಲಕ ದೀಪಾವಳಿಯಂದು ದೇವಿಯನ್ನು ಪ್ರಾರ್ಥಿಸುತ್ತಾರೆ. ಸಮೃದ್ಧಿ, ಸಂತೋಷ, ಶಾಂತಿ ಮತ್ತು ಸಂಪತ್ತನ್ನು ಆಶೀರ್ವದಿಸುವಂತೆ ಕೇಳಿಕೊಳ್ಳುತ್ತಾರೆ. ದೇಶದ ಬಹುತೇಕ ಸ್ಥಳಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. ಇನ್ನೂ ಕೆಲವು ಕಡೆ ಮೂರು ದಿನಗಳ ಕಾಲ ಆಚರಿಸಲಾಗುತ್ತದೆ.

ದೀಪಾವಳಿ ಪೂಜಾ ಮುಹೂರ್ತಗಳು

 

ದೀಪಾರಾಧನೆ (ಮಹಾಕುಬೇರ ಆರಾಧನೆ)

ಸಂಜೆ 4:35 ರಿಂದ 5:58ಕ್ಕೆ ,ಸಂಜೆ 06:10 ರಿಂದ ರಾತ್ರಿ 08:35ಕ್ಕೆ ರಾತ್ರಿ 09:05 ರಿಂದ 10:58 ನಂತರ ಸಿಂಹ ಲಗ್ನದಲ್ಲಿ ಆರಾಧನೆ ಮಾಡಬಹುದು.

 

Exit mobile version