Wednesday, August 27, 2025
Google search engine
HomeUncategorizedತಾಕತ್ ಇದ್ರೆ ಲೋಕಸಭೆ ಚುನಾವಣೆ ಎದುರಿಸಿ ತೋರಿಸಲಿ : ಸಿದ್ರಾಮಯ್ಯಗೆ ಕಾರಜೋಳ ಸವಾಲ್

ತಾಕತ್ ಇದ್ರೆ ಲೋಕಸಭೆ ಚುನಾವಣೆ ಎದುರಿಸಿ ತೋರಿಸಲಿ : ಸಿದ್ರಾಮಯ್ಯಗೆ ಕಾರಜೋಳ ಸವಾಲ್

ವಿಜಯಪುರ : ಸಿಎಂ ಸಿದ್ದರಾಮಯ್ಯನವರು ಸುಳ್ಳು ಗ್ಯಾರಂಟಿ ಕೊಟ್ಟಿದ್ದಾರೆ. ತಾಕತ್ ಇದ್ರೆ ಲೋಕಸಭೆ ಚುನಾವಣೆ ಎದುರಿಸಿ ತೋರಿಸಲಿ ಎಂದು ಸಿದ್ದರಾಮಯ್ಯಗೆ ಮಾಜಿ ಡಿಸಿಎಂ ಗೋವಿಂದ ಎಂ. ಕಾರಜೋಳ ಸವಾಲ್ ಹಾಕಿದ್ದಾರೆ.

ಲೋಕಸಭೆ ಚುನಾವಣೆಗೆ ತಾವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಗೋವಿಂದ ಕಾರಜೋಳ ಶುಭಕೋರಿದರು.

ಬಿಜೆಪಿ ದೊಡ್ಡ ಪಕ್ಷವಾಗಿ, ವಿರೋಧ ಪಕ್ಷವಾಗಿ ಕೆಲಸ ಮಾಡುತ್ತದೆ. ಬಿಜೆಪಿಯವರೇ ವಿರೋಧ ಪಕ್ಷದ ನಾಯಕ ಆಗ್ತಾರೆ. ಮೈತ್ರಿಯಲ್ಲಿ ಅಧಿಕಾರ ಹಂಚಿಕೆ ಮಾಡಬಹುದು, ಮೈತ್ರಿಯಲ್ಲಿ ವಿರೋಧ ಪಕ್ಷದ ಸ್ಥಾನ ಕೊಡಲು ಬರುವುದಿಲ್ಲ. ಹಾಗಾಗಿ, ಬಿಜೆಪಿಯವರೇ ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂದು ಹೇಳಿದ್ದಾರೆ.

25ಕ್ಕೂ ಅಧಿಕ ಸೀಟ್ ಗೆಲ್ಲಿಸಲಿದ್ದಾರೆ

ಪಕ್ಷ ಯುವಕರಿಗೆ ಪ್ರೋತ್ಸಾಹ ಕೊಡುತ್ತೆ ಎಂಬುದನ್ನು ಬಿಜೆಪಿ ತೋರಿಸಿದೆ. ಯಡಿಯೂರಪ್ಪ ಅವರು ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ಬಿಎಸ್​ವೈ ಜೊತೆ ಕೆಲಸ ಮಾಡುವ ಅವಕಾಶ ನನಗೂ ಸಿಕ್ಕಿದೆ. ವಿಜಯೇಂದ್ರ ಅವರ ನಾಯಕತ್ವದಲ್ಲಿ ಯುವಕರು ಸಂಘಟಿತರಾಗಿ, 25ಕ್ಕೂ ಅಧಿಕ ಲೋಕಸಭೆ ಸೀಟ್ ಗೆಲ್ಲಿಸಲಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿ ಯುವಕರಿಗೆ ಅವಕಾಶ ಕೊಡುವ ಕೆಲಸ ಮಾಡುತ್ತೆ. ಈಗಷ್ಟೇ ವಿಜಯೇಂದ್ರ ಕರೆ ಮಾಡಿದ್ರು, ನವೆಂಬರ್ 15ರಂದು ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments