Sunday, August 24, 2025
Google search engine
HomeUncategorizedBengaluru Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Bengaluru Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ. ಕಂಬಳ ಕ್ರೀಡೆಯ ವೀಕ್ಷಣೆಗೆ ಲಕ್ಷಾಂತರ ಜನ ಆಗಮಿಸಲಿದ್ದು, ಸುಗಮ ಸಂಚಾರಕ್ಕಾಗಿ ನಗರದ ಸಂಚಾರ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ.

ಹೌದು, ಕಂಬಳ ವೀಕ್ಷಣೆಗೆ ಎರಡು ದಿನಗಳಲ್ಲಿ6 ರಿಂದ 8 ಲಕ್ಷ ಜನರು ಬರುವ ನಿರೀಕ್ಷೆಯಿದ್ದು, ಅರಮನೆ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಸುಗಮ ಸಂಚಾರಕ್ಕೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ಅರಮನೆ ಮೈದಾನ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅರಮನೆ ಮೈದಾನ ಸುತ್ತಮುತ್ತಲಿನ ರಸ್ತೆಗಳಲ್ಲಿ ಕ್ರೀಡೆ ನಡೆಯುವ ಎರಡೂ ದಿನ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ರವರೆಗೆ ಭಾರಿ ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಭಾರಿ ಸರಕು ಸಾಗಣೆ ವಾಹನಗಳು ಕಂಟೋನ್ಮೆಂಟ್ ರೈಲು ನಿಲ್ದಾಣ, ಹೆಬ್ಬಾಳ ಜಂಕ್ಷನ್, ಕಾವೇರಿ ಥಿಯೇಟರ್ ಜಂಕ್ಷನ್, ಬಿಎಚ್ಇಎಲ್/ಐಐಎಸ್ಸಿ ಜಂಕ್ಷನ್, ಬಸವೇಶ್ವರ ಜಂಕ್ಷನ್ನಲ್ಲಿ ಮಾರ್ಗ ಬದಲಾವಣೆ ಮಾಡಬೇಕು.

ಸಂಚಾರಿ ಪೊಲೀಸ್ ಇಲಾಖೆ ನೀಡಿದ ಪ್ರಮುಖ ಅಂಶಗಳು ಇಲ್ಲಿವೆ

  1. ನಗರದ ಸಿಬಿಡಿ ಏರಿಯಾದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಮೇಖ್ರಿ ವೃತ್ತದ ಬಳಿ ‘ಯು’ ತಿರುವು ಪಡೆದು ಮೇಖ್ರಿ ಸರ್ಕಲ್ ಗೇಟ್ ನಂ.1ರಲ್ಲಿ(ಕೃಷ್ಣ ವಿಹಾರ್) ಬರಬೇಕು. ನಂತರ ವಾಹನಗಳನ್ನು ನಿಲುಗಡೆ ಮಾಡಿ ಕಾರ್ಯಕ್ರಮದ ಸ್ಥಳಕ್ಕೆ ತಲುಪಬೇಕು.
  2. ಬಳ್ಳಾರಿ ರಸ್ತೆಯಲ್ಲಿಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ… ಅಂಡರ್ಪಾಸ್ ಮಾರ್ಗವಾಗಿ ಸಾಗಿ ಗೇಟ್ ನಂ.1ರಲ್ಲಿ(ಕೃಷ್ಣ ವಿಹಾರ್) ಮೈದಾನ ಪ್ರವೇಶಿಸಬೇಕು.
  3. ಯಶವಂತಪುರ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಲಕ್ಕೆ ತಿರುಗಿ ಗೇಟ್ ನಂ.1ರ ಮೂಲಕ ಮೈದಾನ ಪ್ರವೇಶಿಸಬೇಕು.
  4.  ಕ್ಯಾಬ್ ಸೇವೆ ಬಳಸಿಕೊಳ್ಳುವವರು ಗೇಟ್ ನಂ.2ರ ಮೂಲಕ ಮೈದಾನದೊಳಗೆ ಬಂದು ನಿಗದಿತ ಸ್ಥಳದಲ್ಲಿಇಳಿಯಬೇಕು. ಬಳಿಕ ಕ್ಯಾಬ್ಗಳು ಗೇಟ್ ನಂ.3ರ ಮೂಲಕ ನಿರ್ಗಮಿಸಬೇಕು.
  5. ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ಎಲ್ಲಾ ವಾಹನಗಳು ಕಡ್ಡಾಯವಾಗಿ ಜಯಮಹಲ್ ರಸ್ತೆಯ ಅಮಾನುಲ್ಲಾ ಖಾನ್ ಗೇಟ್ ಮೂಲಕ ನಿರ್ಗಮಿಸಬೇಕು.

ವಾಹನ ನಿಲುಗಡೆ ನಿರ್ಬಂಧಿತ ರಸ್ತೆಗಳು

ಅರಮನೆ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಸಿ.ವಿ.ರಾಮನ್ ರಸ್ತೆ, ವಸಂತನಗರ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿದುರ್ಗ ರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿತ ರಸ್ತೆಗಳಾಗಿವೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments