Site icon PowerTV

ನಾಳೆ ಬೆಂಗಳೂರಿನಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ.

5 ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ ಈಗಾಗಲೇ 3-1 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ವಶಪಡಿಸಿಕೊಂಡಿದೆ. ನಾಳೆಯ ಪಂದ್ಯವನ್ನು ಗೆದ್ದು ಆಸಿಸ್​ ಪಡೆಗೆ ಶಾಕ್ ನೀಡಲು ಸೂರ್ಯಕುಮಾರ್ ಯಾದವ್ ನೇತೃತ್ವದ ಯುವ ಪಡೆ ಸಜ್ಜಾಗಿದೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಾಹರ್, ಅವೇಶ್ ಖಾನ್, ಅಕ್ಷರ್ ಪಟೇಲ್ ಮತ್ತು ರವಿ ಬಿಷ್ಣೋಯ್

ಆಸ್ಟ್ರೇಲಿಯ ತಂಡ

ಮ್ಯಾಥ್ಯೂ ವೇಡ್ (ನಾಯಕ), ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ

Exit mobile version