Wednesday, August 27, 2025
Google search engine
HomeUncategorizedಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ-20 ಪಂದ್ಯ ಮಳೆಯಿಂದ ರದ್ದು

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ-20 ಪಂದ್ಯ ಮಳೆಯಿಂದ ರದ್ದು

ಬೆಂಗಳೂರು : ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಇಂದು ಸಂಜೆಯಿಂದ ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ವಿಪರೀತ ಮಳೆ ಸುರಿಯಲಾರಂಭಿಸಿತು. ಟಾಸ್​ ಪ್ರಕ್ರಿಯೆಗೂ ಮಳೆ ಅವಕಾಶ ನೀಡಲಿಲ್ಲ. ವೀಕೆಂಡ್ ಮೂಡ್​ನಲ್ಲಿದ್ದ ಕ್ರಿಕೆಟ್ ಪ್ರೇಮಿಗಳು ಚುಟುಕು ಪಂದ್ಯ ನೋಡಲು ಕಾಯುತ್ತಿದ್ದರು. ಆದರೆ, ಅಭಿಮಾನಿಗಳ ಆಸೆಗೆ ವರುಣ ತಣ್ಣಿರು ಎರಚಿದ್ದಾನೆ.

ಮೂರು ಪಂದ್ಯಗಳ ಟಿ-20 ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 12 ರಂದು ನಡೆಯಲಿದೆ. ಮೂರನೇ ಪಂದ್ಯವು ಡಿಸೆಂಬರ್ 14 ರಂದು ಜೋಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ.), ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

ದಕ್ಷಿಣ ಆಫ್ರಿಕಾ ತಂಡ

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments