Saturday, August 23, 2025
Google search engine
HomeUncategorizedರಾಮಮಂದಿರ ಉದ್ಘಾಟನೆಗೆ ನಟ ರಜನಿಕಾಂತ್​ಗೆ ಆಹ್ವಾನ

ರಾಮಮಂದಿರ ಉದ್ಘಾಟನೆಗೆ ನಟ ರಜನಿಕಾಂತ್​ಗೆ ಆಹ್ವಾನ

ಬೆಂಗಳೂರು : ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ಆಹ್ವಾನಿಸಲಾಗಿದೆ.

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ರಜನಿಕಾಂತ್ ಅವರನ್ನು ಆಹ್ವಾನಿಸಿರುವ ಫೋಟೋಗಳನ್ನು ಬಿಜೆಪಿ ನಾಯಕ ರಾವ್ ಅರ್ಜುನಮೂರ್ತಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ರಾಮಮಂದಿರದ ಉದ್ಘಾಟನೆ ಸಂಭ್ರಮಕ್ಕೆ ತಲೈವಾ ಸಾಕ್ಷಿಯಾಗಲಿದ್ದಾರೆ.

ಇದೇ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ (ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ) ವಿಶ್ವದಾದ್ಯಂತ ಗಣ್ಯರು ಭಾಗವಹಿಸಲಿದ್ದಾರೆ. ದಕ್ಷಿಣ ಭಾರತದ ಕೆಲವು ನಟರಿಗೆ ಮಾತ್ರ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ.

ತಲೈವಾ ಅಭಿಮಾನಿಗಳು ಫುಲ್ ಖುಷ್

ನಟ ಮೋಹನ್ ಲಾಲ್, ಚಿರಂಜೀವಿ, ಕನ್ನಡದ ನಟ ಯಶ್, ರಿಷಬ್ ಶೆಟ್ಟಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ. ಇದೀಗ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ರಜನಿಕಾಂತ್ ಸಹ ಭಾಗಿಯಾಗಲಿದ್ದಾರೆ. ತಲೈವಾ ಅಭಿಮಾನಿಗಳು ಈ ಸುದ್ದಿಯಿಂದ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments